29.8 C
Karnataka
Monday, May 13, 2024

    ಇಷ್ಟು ಬೇಗ ಹೊರಟು ಹೋಗಲು ಅವಸರ ಏನಿತ್ತು ಚಿರಂಜೀವಿ

    Must read

    ಕೊರೊನಾ ದಾಳಿಯಿಂದ ಈಗಾಗಲೇ ತತ್ತರಿಸಿರುವ ಸಿನಿಮಾ ರಂಗಕ್ಕೆ ಮತ್ತೊಂದು ಶಾಕಿಂಗ್ ಸುದ್ದಿ. ಅತೀ ಚಿಕ್ಕ ವಯಸ್ಸಿನಲ್ಲೇ ಚಿರಂಜೀವಿ ಸರ್ಜಾ, ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ರವಿವಾರ ಮಧ್ಯಾಹ್ನ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೇ ಬಾರದ ಲೋಕಕ್ಕೆ ತೆರಳಿದ್ದಾರೆ. ಜತೆಗೆ ಕಳೆದೆರಡು ತಿಂಗಳಿಂದ ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರು ಎನ್ನಲಾಗುತ್ತಿದೆ.

    2009 ರಲ್ಲಿ ವಾಯು ಪುತ್ರ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ ಇವರು, ಈವರೆಗೂ 22 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಮ್ಮ ಐ ಲವ್ ಯೂ, ಚಂದ್ರಲೇಖ, ಗಂಡೆದೆ, ಆಟಗಾರ, ವಾಯುಪುತ್ರ ಇವರ ಸೂಪರ್ ಹಿಟ್ ಚಿತ್ರಗಳು. ಕೊನೆಯದಾಗಿ ಇವರ ಶಿವಾರ್ಜುನ ಸಿನಿಮಾ ರಿಲೀಸ್ ಆಗಿತ್ತು. ರಾಜಮಾರ್ತಾಂಡ ಬಿಡುಗಡೆಗೆ ಸಿದ್ಧವಾಗಿದೆ.


    ಕನ್ನಡ ಸಿನಿಮಾ ರಂಗಕ್ಕೆ ಸರ್ಜಾ ಕುಟುಂಬದ ಕೊಡುಗೆ ಅಪಾರ. ಇವರ ಸೋದರ ಮಾವ ಕಿಶೋರ್ ಸರ್ಜಾ ಇವರನ್ನು ವಾಯುಪುತ್ರ ಸಿನಿಮಾದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಲಾಂಚ್ ಮಾಡಿದ್ದರು. ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಇವರ ಬೆನ್ನೆಲುಬಾಗಿ ನಿಂತಿದ್ದರು. ಸಹೋದರ ಧ್ರುವ ಸರ್ಜಾ ಕೂಡ ಸಹೋದರ ಅನೇಕ ಸಿನಿಮಾಗಳಿಗೆ ಸಾಥ್ ನೀಡಿದ್ದರು.
    ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್​ ಅವರ ಜೊತೆ 2017ರಲ್ಲಿ ನಿಶ್ವಿತಾರ್ಥ ಮಾಡಿಕೊಂಡಿದ್ದು, ಈ ಜೋಡಿ 2018ರಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.


    ಅವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ, ಸಂಸದೆ ಸುಮಲತಾ ಅಂಬರೀಶ್, ನಟರಾದ ಕಿಚ್ಚ ಸುದೀಪ್, ದರ್ಶನ್, ಗಣೇಶ್, ಶಿವರಾಜ್ ಕುಮಾರ್, ಪುನೀತ್, ನಿರ್ದೇಶಕ ಚೈತನ್ಯ ಸೇರಿದಂತೆ ಸಿನಿಮಾ ರಂಗದ ಅನೇಕ ಗಣ್ಯರು ಚಿರು ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
    ನಟಿ ಸುಮಲತಾ ಅಂಬರೀಶ್ ತಮ್ಮ ಕುಟುಂಬದ ಜತೆಗಿನ ಚಿರು ಒಡನಾಟವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಇದನ್ನೂಓದಿ : ನಿನ್ನ ಮಡದಿಯ ಪರವಾಗಿ ನಾನಲ್ಲ.. ಯಾರೂ ನಿನ್ನನ್ನ ಕ್ಷಮಿಸೋದಿಲ್ಲ, ಅರ್ಧಕ್ಕೆ ಯಾತ್ರೆ ಮುಗಿಸಿದವನು ನೀನು ಅಂತ

    ಡಾ. ಶರಣು ಹುಲ್ಲೂರು
    ಡಾ. ಶರಣು ಹುಲ್ಲೂರು
    ಡಾ. ಶರಣು ಹುಲ್ಲೂರು ವೃತ್ತಿಯಿಂದ ಪತ್ರಕರ್ತ . ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿರುವ ಅವರು ಹಲವು ಪತ್ರಿಕಾ ಬಳಗದಲ್ಲಿ ಸೇವೆ ಸಲ್ಲಿಸಿದ್ದಾರೆ. 'ತಪ್ಪು ಮಾಡಿದ ತಾತ', 'ಮುಂದಿರುವ ಮೌನ', 'ಜುಗಲ್ಬಂದಿ' ಎಂಬ ಕವನ ಸಂಕಲನಗಳನ್ನು, ’ಚಂದನ ಸಿಂಚನ’ ಎಂಬ ಬಿ.ಜೆ.ಅಣ್ಣಿಗೇರಿ ಅವರ ಜೀವನ ಚರಿತ್ರೆಯನ್ನು,  ’ಮಲ್ಲಿಗೆ’, ’ಕನಸಿನ ಹುಡುಗ’ ನಾಟಕವನ್ನು ರಚಿಸಿದ್ದಾರೆ. ಬದುಕು ಹ್ಯಾಕ್ ಆಗಿದೆ, ಜುಗಲ್ ಬಂದಿ ಕವಿತೆಗಳು, ಸಿನಿ ಸಾಂಗತ್ಯ, ಅಂಬರೀಶ್ ಬದುಕು ಬರಹ ಇವರ ಮಹತ್ತರ ಕೃತಿಗಳು.ತಕಧಿಮಿಕಾ, ಮುಂಗಾರಿನ ಕನಸು ಕಾರ್ತೀಕ ದೀಪ, ಬದುಕು, ಮದರಂಗಿ ಮುಂತಾದ ಧಾರಾವಾಹಿಗಳಿಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ರಚಿಸಿದ್ದಾರೆ. ಕಾರ್ಯನಿರತ ಪತ್ರಕರ್ತರ ಸಂಘದ 'ಅತ್ಯುತ್ತಮ ಸಿನಿಮಾ ಪತ್ರಕರ್ಕ' ಪ್ರಶಸ್ತಿ, 'ಗೌರಿ ಲಾಮಯ್ಯ ದತ್ತಿ' ಪ್ರಶಸ್ತಿ, 'ಪುಟ್ಟರಾಜ ಗವಾಯಿ ಕಾವ್ಯ' ಪ್ರಶಸ್ತಿ, ಕರ್ನಾಟಕ ರಾಜ್ಯ ಚಲನಚಿತ್ರ ಸಾಹಿತ್ಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ
    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!