19.9 C
Karnataka
Sunday, September 22, 2024

    ಸಿಇಟಿ ಮುಂದಕ್ಕೆ; ಅಗಸ್ಟ್‌ 28 & 29ರಂದು ಪರೀಕ್ಷೆ

    Must read

    ಕೋವಿಡ್‌ ಎರಡನೇ ಅಲೆ ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿದ ಹಿನ್ನೆಲೆಯಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೂ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.

    ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಹೊಸ ವೇಳಾಪಟ್ಟಿಯಂತೆ ಮುಂಬರುವ ಅಗಸ್ಟ್‌ 28 & 29ರಂದು ಸಿಇಟಿ ನಡೆಯಲಿದೆ. ಹಾಗೆಯೇ, 30ರಂದು ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಶೀಘ್ರದಲ್ಲಿಯೇ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

    ಈ ಮೊದಲು ಪ್ರಕಟಿಸಲಾಗಿದ್ದ ವೇಳಾಪಟ್ಟಿಯಂತೆ ಜುಲೈ 7 & 8 ರಂದು ಸಿಇಟಿ ಹಾಗೂ 9ರಂದು ಕನ್ನಡ ಪರೀಕ್ಷೆ ನಡೆಯಬೇಕಾಗಿತ್ತು.

    ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್‌ ತಾಣಕ್ಕೆ ಭೇಟಿ ನೀಡಬಹುದು. ವಿದ್ಯಾರ್ಥಿಗಳು ಕೋವಿಡ್‌ನಿಂದ ಸುರಕ್ಷಿತವಾಗಿರಿ ಮತ್ತೂ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗೆ ಉತ್ತಮ ಸಿದ್ಧತೆ ಮಾಡಿಕೊಳ್ಳಿ ಎಂದು ಡಾ.ಅಶ್ವತ್ಥನಾರಾಯಣ ಹಾರೈಸಿದ್ದಾರೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!