19.9 C
Karnataka
Sunday, September 22, 2024

    ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ರಾಜ್ಯದ ಪಬ್ಲಿಕ್ ಪರೀಕ್ಷೆಗಳ ಬಗ್ಗೆ ಶೀಘ್ರ ನಿರ್ಧಾರ

    Must read

    ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಇಂದು ಪ್ರಧಾನಿ ನೇರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರಿಗಳ ಮಹತ್ವದ ಸಭೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಪಡಿಸಲು ನಿರ್ಧರಿಸಲಾಯಿತು.

    ಫಲಿತಾಂಶ ಪ್ರಕಟಿಸಲು ಸಧ್ಯದಲ್ಲೇ ಸೂಕ್ತ ಮಾನದಂಡ ರಚಿಸಲಾಗವುದು. ಕೋವಿಡ್ ಸಂಕಟದ ಸಮಯದಲ್ಲಿ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಯೇ ಮುಖ್ಯ ಎಂದು ಸಭೆ ಅಭಿಪ್ರಾಯ ಪಟ್ಟಿತು.

    ರಾಜ್ಯದಲ್ಲಿ ಶೀಘ್ರ ನಿರ್ಧಾರ

    ಕೇಂದ್ರ ಸರಕಾರದ ಈ ನಿರ್ಧಾರ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ . ಕರ್ನಾಟಕದ ಮಟ್ಟಿಗೆ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

    ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ..

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!