20.6 C
Karnataka
Sunday, September 22, 2024

    ಜೀವನ್ಮರಣ ಹೋರಾಟದಲ್ಲಿ ನಟ ಸಂಚಾರಿ ವಿಜಯ್; ಮಿದುಳು ನಿಷ್ಕ್ರಿಯ; ಚಿತ್ರರಂಗ ಆಘಾತ‌, ವೆಂಟಿಲೇಟರ್‌ ಮೇಲೆ ನಟ

    Must read

    ಶನಿವಾರ ರಾತ್ರಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬನ್ನೇರುಘಟ್ಟ ರಸ್ತೆಯ ಸಾಗರ್‌ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಚಿಂತಾಜನಕ ಸ್ಥಿತಿಯಲ್ಲೇ ಇದ್ದಾರೆ. ಅವರ ಮೆದುಳು ಸದ್ಯಕ್ಕೆ ಕೆಲಸ ಮಾಡುತ್ತಿಲ್ಲ. ಆದರೆ ಇತರ ಅಂಗಾಗಗಳು ಸುಸ್ಥಿತಿಯಲ್ಲಿವೆ. ಹೀಗಾಗಿ ಸಂಜೆಯ ನಂತರ ನಡೆಯುವ ಮತ್ತೊಂದು ಪರೀಕ್ಷೆ ಅವರ ಆರೋಗ್ಯದ ಸ್ಥಿತಿಯನ್ನು ತಿಳಿಸಲಿದೆ.

    ವೆಂಟಿಲೇಟರ್‌ ಮೇಲೆ ಚಿಕಿತ್ಸೆ ಪಡೆಯುತ್ತ ಜೀವನ್ಮರಣ ಹೋರಾಟ ನಡೆಸುತ್ತಿರುವ ವಿಜಯ್‌ ಅವರ ಅಂಗಾಂಗಳನ್ನು ದಾನ ಮಾಡುವ ನಿರ್ಧಾರವನ್ನು ಅವರ ಕುಟುಂಬ ಸದಸ್ಯರು ಕೈಗೊಂಡಿದ್ದು, ಸದ್ಯಕ್ಕೆ ಅಪೊಲೋ ವೈದ್ಯರೂ ಈ ಕಾರ್ಯದಲ್ಲಿ ನಿರತರಾಗಿದ್ದಾರೆ.

    ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಆಸ್ಪತ್ರೆಗೆ ಭೇಟಿ ನೀಡಿದ್ದರು. ನಟ ಜಗ್ಗೇಶ ಕೂಡ ಜತೆಯಲ್ಲಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!