21.2 C
Karnataka
Sunday, September 22, 2024

    ಶಾಲೆ ಆರಂಭಕ್ಕೆ ಗ್ರೀನ್‌ ಸಿಗ್ನಲ್‌ ಕೊಟ್ಟ ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ: ಗಂಭೀರವಾಗಿ ಪರಿಶೀಲನೆ ಮಾಡಲಿದೆ ಸರಕಾರ

    Must read

    ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಆರಂಭಿಸುವುದಕ್ಕೆ ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರು, ವೈದ್ಯರ ಉನ್ನತ ಸಮಿತಿ ಸಲಹೆ ನೀಡಿದೆ.

    ಬೆಂಗಳೂರಿನಲ್ಲಿ ಮಂಗಳವಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದರು.

    ತಜ್ಞರ ವರದಿಯ ಶಿಫಾರಸು

    • ಸಮ, ಬೆಸ ಮಾದರಿಯಲ್ಲಿ ಶಾಲಾ ತರಗತಿಗಳನ್ನು ಆರಂಭಿಸುವುದಕ್ಕೆ ಸಲಹೆ ನೀಡಿರುವ ತಜ್ಞರು, ಮೊದಲ ಹಂತದಲ್ಲಿ ಕಾಲೇಜುಗಳನ್ನು ಆರಂಭಿಸುವುದು.
    • ಎರಡನೇ ಹಂತದಲ್ಲಿ 7ರಿಂದ 10ನೇ ತರಗತಿ, ಮೂರನೇ ಹಂತದಲ್ಲಿ 5ರಿಂದ 7ನೇ ತರಗತಿ ಆರಂಭಿಸಬೇಕು.
    • ಮಕ್ಕಳಿಗೆ ಮಾಸ್ಕ್ ಕಡ್ಡಾಯ. ಸರಕಾರವೇ ಮಾಸ್ಕ್ ನೀಡಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
    • ಕಡ್ಡಾಯವಾಗಿ ಶಿಕ್ಷಕರು, ಶಾಲೆಯ ಇತರೆ ಸಿಬ್ಬಂದಿ ಲಸಿಕೆ ಹಾಕಿಸಿಕೊಳ್ಳಬೇಕು. ಶಾಲಾ ಆವರಣಕ್ಕೆ ಅನ್ಯರಿಗೆ ಪ್ರವೇಶ ನಿರ್ಬಂಧಿಸಬೇಕು. ಆರೋಗ್ಯವಂತ ಮಕ್ಕಳು ಮಾತ್ರ ಶಾಲೆಗೆ ಬರಬೇಕು.
    • ವಾರಕ್ಕೊಮ್ಮೆ ಸ್ಥಳೀಯ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಬೇಕು. ಮಕ್ಕಳಿಗೆ ಸರಕಾರವೇ ಪ್ರತ್ಯೇಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು.
    • ಕೊರೊನಾ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ ಆವರಣ, ಸುತ್ತಮುತ್ತ ತಿನಿಸು ಮಾರಾಟವನ್ನು ನಿಷೇಧಿಸಬೇಕು.
    • ಪೋಷಕರು ಸಮ್ಮತಿಸಿದರೆ ಮಕ್ಕಳನ್ನ ಶಾಲೆಗೆ ಕರೆತರುವುದು ಬೇಡ. ಮಕ್ಕಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ.
    • ಆನ್‌ಲೈನ್ ಮತ್ತು ಆಫ್‌ಲೈನ್ ಎರಡು ಮಾದರಿಯ ಕಲಿಕೆಗೆ ಅವಕಾಶ ನೀಡಬಹುದು.
    • ಮಕ್ಕಳಿಗೆ ಸರಕಾರದಿಂದ ಪೌಷ್ಟಿಕ ಆಹಾರ ನೀಡಬೇಕು ಹಾಗೂ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡಿಸಬೇಕು. ಊಟವನ್ನ ಸ್ಥಳೀಯ ಮಟ್ಟದಲ್ಲೇ ನೀಡಬೇಕು.
    • ಶಾಲೆಗಳಲ್ಲಿ ದೈಹಿಕ ಅಂತರಕ್ಕೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಒಬ್ಬರ ವಸ್ತುಗಳು ಒಬ್ಬರು ಮುಟ್ಟದಂತೆ ನಿಗಾ ವಹಿಸಬೇಕು.
    • ದಿನದಲ್ಲಿ 2ರಿಂದ 3 ಗಂಟೆ ಮಾತ್ರ ತರಗತಿ ನಡೆಯಬೇಕು.
    • 12ರಿಂದ 18 ವರ್ಷದ ಮಕ್ಕಳಿಗೆ ಆದಷ್ಟು ಬೇಗ ಲಸಿಕೆ ನೀಡುವುದಕ್ಕೆ ಅನುಮೋದನೆ ಕೊಡುವುದು ಉತ್ತಮ.
    • ಶಿಫಾರಸು ಮಾಡಿರುವ ಎಲ್ಲ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇಲ್ಲದಿದ್ದರೆ ಮಕ್ಕಳಿಗೆ ಹೆಚ್ಚು ಅಪಾಯ ತಪ್ಪಿದ್ದಲ್ಲ.
    • ರಾಜ್ಯದಲ್ಲಿ 18 ವರ್ಷದೊಳಗಿನ 2.38 ಕೋಟಿ ಮಕ್ಕಳಿದ್ದು, ಸರಿಯಾಗಿ ನಿರ್ವಹಣೆ ಮಾಡದಿದ್ದರೆ ಸೋಂಕು ಹರಡುತ್ತದೆ. ಮೂರನೇ ಅಲೆಯಲ್ಲಿ 3.40 ಲಕ್ಷ ಮಕ್ಕಳಿಗೆ ಸೋಂಕು ಹರಡುತ್ತದೆ ಎಂದು ಅಂದಾಜಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
    • *ಸುಮಾರು 6,801 ಐಸಿಯು, ಹೆಚ್​ಡಿಯು, ವೆಂಟಿಲೇಟರ್ ಬೆಡ್ 23,804 ಸಾಮಾನ್ಯ ಬೆಡ್‌ಗಳು ಬೇಕಾಗಬಹುದು. ಕೊವಿಡ್ ಕೇರ್ ಸೆಂಟರ್‌ಗಳಲ್ಲಿ 43,000 ಬೆಡ್ ಅಗತ್ಯವಿದೆ ಎಂದು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಒತ್ತಿ ಹೇಳಿದೆ.

    ಶಾಲೆ ಪುನಾರಂಭದ ಬಗ್ಗೆ ಏನೂ ಹೇಳಲಾಗದು: ಡಾ.ದೇವಿಶೆಟ್ಟಿ

    ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ವರಿಯಲ್ಲಿ ಕೆಲ ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ. ಆದರೆ, ಆ ಬಗ್ಗೆ ಬಹಿರಂಗವಾಗಿ ಹೇಳಲಾರೆ. ಮುಖ್ಯಮಂತ್ರಿಗಳೇ ಮಾಹಿತಿ ನೀಡಲಿದ್ದಾರೆ ಎಂದು ಸಮಿತಿ ಅಧ್ಯಕ್ಷ ಡಾ.ದೇವಿಶೆಟ್ಟಿ ಮಾಧ್ಯಮಗಳ ಮುಂದೆ ಹೇಳಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!