19.9 C
Karnataka
Sunday, September 22, 2024

    ಲಸಿಕೆ ನೀಡಿದ ನಂತರವಷ್ಟೆ ಕಾಲೇಜು ಆರಂಭಿಸುವತ್ತ ಆರೋಗ್ಯ ಸಚಿವರ ಒಲವು

    Must read

    18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ನಂತರ ಕಾಲೇಜು ಆರಂಭಿಸುವ ಕುರಿತು ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಲೇಜು ಆರಂಭದ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಈ ಬಗ್ಗೆ ಪ್ರಾಥಮಿಕ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ಕಾಲೇಜು ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸಬಹುದು ಎಂದು ತಾಂತ್ರಿಕ ಸಲಹಾ ಸಮಿತಿಯು ಮುಖ್ಯಮಂತ್ರಿಗಳ ಸಭೆಯಲ್ಲಿ ಸಲಹೆ ನೀಡಿತ್ತು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಮತ್ತೆ ಚರ್ಚಿಸಲಾಗುವುದು. ವಿದ್ಯಾರ್ಥಿಗಳ ಕ್ಷೇಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದ್ದರಿಂದ ಲಸಿಕೆ ಕೊಟ್ಟೇ ಕಾಲೇಜು ಆರಂಭಿಸಬೇಕೆಂದರೆ ಯಾವ ರೀತಿ, ಎಷ್ಟು ದಿನದೊಳಗೆ ಲಸಿಕಾ ಕಾರ್ಯಕ್ರಮ ಮಾಡಬೇಕೆಂದು ಚರ್ಚಿಸಲಾಗುವುದು ಎಂದರು.

    ಮೊದಲು ಉನ್ನತ ಶಿಕ್ಷಣ, ನಂತರ ಪ್ರೌಢಶಾಲೆ ಆರಂಭಿಸಬೇಕಾಗುತ್ತದೆ. ಹೀಗೆ ಹಂತಹಂತವಾಗಿ ಆರಂಭಿಸಬೇಕಾಗುತ್ತದೆ. ಸಣ್ಣ ಮಕ್ಕಳಿಗೆ ಮೊದಲೇ ಶಾಲೆ ಆರಂಭಿಸಲಾಗುವುದಿಲ್ಲ. ಇದರಲ್ಲಿ ಸರ್ಕಾರದ ಜವಾಬ್ದಾರಿ ಹೆಚ್ಚಿದೆ ಎಂದರು.

    ಸಚಿವರು ಹೇಳಿದ ಇತರೆ ಅಂಶಗಳು

    ರಾಜ್ಯದಲ್ಲಿ 2 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಿದ್ದು, ದಕ್ಷಿಣ ಭಾರತದಲ್ಲೇ ರಾಜ್ಯ ನಂ.1 ಆಗಿದೆ. ಲಸಿಕೆ ಪಡೆದವರು ಸೋಂಕಿಗೊಳಗಾಗಿರುವುದು ತೀರಾ ಕಡಿಮೆ.

    ಜಿನೋಮಿಕ್ ಸೀಕ್ವೆನ್ಸ್ ನಿಂದ ರೂಪಾಂತರಿ ವೈರಾಣು ಪತ್ತೆ ಮಾಡಲಾಗುತ್ತಿದೆ. ಡೆಲ್ಟಾ ಪ್ಲಸ್ ವೈರಾಣುವಿನ ಒಂದು ಪ್ರಕರಣ ಮೈಸೂರಿನಲ್ಲಿ ಕಂಡುಬಂದಿದ್ದು, ರೋಗಿಯನ್ನು ಐಸೋಲೇಟ್ ಮಾಡಲಾಗಿದೆ. ಅವರ ಸಂಪರ್ಕಿತರಿಗೆ ವೈರಾಣು ಹರಡಿಲ್ಲ. ಸೀಕ್ವೆನ್ಸ್ ಗೆ 6 ಲ್ಯಾಬ್ ರೂಪಿಸಲಾಗುತ್ತಿದೆ.

    ಸರ್ಕಾರಿ ಆಸ್ಪತ್ರೆಗಳಲ್ಲೇ ಹಾಸಿಗೆ ಖಾಲಿ ಇದೆ. ಖಾಸಗಿಯಲ್ಲಿ ನಾನ್ ಕೋವಿಡ್ ರೋಗಿ ಬಂದರೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. 3 ನೇ ಅಲೆ ಬಂದರೆ ಆಗ ಹಾಸಿಗೆ ಕೇಳಲಾಗುವುದು.

    ಎತ್ತಿನಹೊಳೆ ಯೋಜನೆ ಬೇಗ ಅನುಷ್ಠಾನವಾಗಲು ಒತ್ತಡ ಹೇರಲಾಗುವುದು. ಈ ಭಾಗದ ಪ್ರತಿನಿಧಿಗಳು ಸೇರಿ ಸಿಎಂಗೆ ಮನವರಿಕೆ ಮಾಡಿಕೊಡಲಾಗಿದೆ. ಕೋವಿಡ್ ನಿಂದಾಗಿಯೂ ಸ್ವಲ್ಪ ಸಮಸ್ಯೆಯಾಗಿದೆ.

    ಕೇಂದ್ರ ಸರ್ಕಾರ ಒಂದೇ ದಿನ 80 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಿರುವುದನ್ನು ಕಾಂಗ್ರೆಸ್ ಮುಖಂಡರು ಸ್ವಾಗತಿಸಬೇಕಿತ್ತು. ರಾಜಕೀಯದಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು ಎಂದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!