ವಿಶ್ವದ ಏಕೈಕ ಸಂಸ್ಕೃತ ದೈನಿಕ ಸುಧರ್ಮಾ ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್ ಅಯ್ಯಂಗಾರ್ (64) ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ ಸಂಸ್ಕೃತ ಪತ್ರಿಕೆಯ ಕೆಲಸದಲ್ಲಿರುವಾಗಲೇ ಅವರು ತೀವ್ರ ಹೃದಯಾಘಾತಕ್ಕೆ ಒಳಗಾದರು.
2019ರಲ್ಲಿ ಪದ್ಮಶ್ರೀ ಪುರಸ್ಕೃತರಾಗಿದ್ದ ಸಂಪತ್ ಕುಮಾರ್ ಕಳೆದ ನಾಲ್ಕು ದಶಕಗಳಿಂದ ಸುಧರ್ಮಾ ಪತ್ರಿಕೆಯನ್ನು ಸಂಪಾದಿಸಿ ಪ್ರಕಟಿಸುವ ಮೂಲಕ ಸಂಸ್ಕೃತ ಭಾಷೆ ಉಳಿವಿಗೆ ಶ್ರಮಿಸಿದ್ದರು.