26.8 C
Karnataka
Sunday, September 22, 2024

    ಆಡಳಿತ ಸುಧಾರಣಾ ಆಯೋಗದ ವರದಿ ಸಲ್ಲಿಕೆ

    Must read

    ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಇಂದು ತನ್ನ ಮೊದಲ ವರದಿಯನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿತು.

    ಆಯೋಗದ ಅಧ್ಯಕ್ಷರು ಹಾಗೂ ನಿವೃತ್ತ ಮುಖ್ಯಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ ಹಾಗೂ ಸಮಿತಿ ಸದಸ್ಯ ಎನ್.ಎಸ್.ಪ್ರಸನ್ನಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ರಾಜ್ಯದ ನಾಲ್ಕೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯವನ್ನು ರದ್ದುಮಾಡಬಹುದು. ಬೆಂಗಳೂರಿನಲ್ಲಿ ಕಂದಾಯ ಆಯುಕ್ತಾಲಯ ಸ್ಥಾಪಿಸಬಹುದು. 800 ಆನ್ ಲೈನ್ ಸೇವೆಗೆ ಅಟಲ್ ಜಿ ಜನಸ್ನೇಹಿ ಕೇಂದ್ರ ಏಕಗವಾಕ್ಷಿ ಆಗಬೇಕು. ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಅಧಿಕಾರಿಯಾಗಿ ಮರು ನಾಮಕರಣ ಮಾಡಬಹುದು ಮುಂತಾದ ಶಿಫಾರಸ್ಸಗಳನ್ನು ಮಾಡಿದೆ.

    ಸಾರ್ವಜನಿಕರಿಗೆ ಹತ್ತಿರವಾದ 3 ಇಲಾಖೆಗಳನ್ನು ಮೊದಲ ಹಂತದಲ್ಲಿ ತೆಗೆದುಕೊಳ್ಳಲಾಗಿದೆ. ಕಂದಾಯ, ಆಹಾರ ಮತ್ತು ನಾಗರಿಕೆ ಪೂರೈಕೆ ಇಲಾಖೆ ಹಾಗೂ ಸಾರಿಗೆ ಇಲಾಖೆಗೆ ಸಂಬಂಧಿಸಿದ 856 ಶಿಫಾರಸ್ಸು ಗಳನ್ನು ಮಾಡಲಾಗಿದೆ.

    ಶಿಫಾರಸ್ಸಿನ ವಿವರಗಳು ಇಲ್ಲಿವೆ

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!