19.9 C
Karnataka
Sunday, September 22, 2024

    ರಾಜ್ಯದಲ್ಲಿ ತಿಂಗಳಿಗೆ 60 ಲಕ್ಷ ಜನರಿಗೆ ಲಸಿಕೆ

    Must read

    ರಾಜ್ಯ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

    ಶೇಷಾದ್ರಿಪುರದ ಮಾರುತಿ ಆಸ್ಪತ್ರೆಯಲ್ಲಿಂದು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮತ್ತು ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅವರು, ಪ್ರತೀ ತಿಂಗಳೂ ಹಂಚಿಕೆಯಾಗುವ ವ್ಯಾಕ್ಸಿನ್‌ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರಕಾರದಿಂದ ಮಾಸಿಕ 60 ಲಕ್ಷ ಲಸಿಕೆ ಹಂಚಿಕೆಯಾಗುತ್ತಿದೆ ಎಂದರು.

    ಈ ಹಂಚಿಕೆ ಆಧಾರದಲ್ಲಿಯೇ ರಾಜ್ಯ ಸರಕಾರ ತಿಂಗಳಿಗೆ ರಾಜ್ಯಾದ್ಯಂತ 60 ಲಕ್ಷ ಜನರಿಗೆ ಲಸಿಕೆ ನೀಡುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ 60 ಲಕ್ಷ ಜನರಿಗೆ ಲಸಿಕೆ ಕೊಡಲಾಗಿತ್ತು. ಈ ತಿಂಗಳಲ್ಲೂ ಅಷ್ಟೇ ಪ್ರಮಾಣದ ಜನರಿಗೆ ವ್ಯಾಕ್ಸಿನ್‌ ಕೊಡಲಾಗುವುದು. ಇನ್ನೂ ಹೆಚ್ಚು ಪ್ರಮಾಣದಲ್ಲಿ ಲಸಿಕೀಕರಣ ಮಾಡಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

    ಮೂರನೇ ಅಲೆ ಬಗ್ಗೆ ಆತಂಕ ಬೇಡ:

    ಮೂರನೇ ಅಲೆಯ ಬಗ್ಗೆ ಎಲ್ಲರಿಗೂ ಆತಂಕ ಇರುವುದು ನಿಜ. ಹಾಗಂತ ಹೆದರಬೇಕಿಲ್ಲ. ಈಗಾಗಲೇ ಕೇಂದ್ರದ ನೆರವಿನಿಂದ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಆಕ್ಸಿಜನ್‌ ಉತ್ಪಾದನೆ ಮತ್ತು ಸಂಗ್ರಹ, ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು ಸೇರಿ ಎಲ್ಲ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದರು.

    ಇದರ ಜತೆಯಲ್ಲೇ ಲಸಿಕೀಕರಣವನ್ನೂ ಹೆಚ್ಚಿಸಲಾಗುತ್ತಿದೆ. ರಾಜ್ಯದಲ್ಲಿ ಕೋವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆಗಳನ್ನು ಕೊಡಲಾಗುತ್ತಿದೆ. ಕೇಂದ್ರ ಸರಕಾರಕ್ಕೆ ಇನ್ನೂ ಹೆಚ್ಚಿನ ಲಸಿಕೆಗಾಗಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ, ಲಸಿಕೆ ಕಂಪನಿಗಳಿಗೆ ಉತ್ಪಾದನೆ ಹೆಚ್ಚಿಸುವಂತೆ ಕೋರಲಾಗಿದೆ. ಜತೆಗೆ, ಲಭ್ಯವಾಗುತ್ತಿರುವ ಲಸಿಕೆಯನ್ನೂ ಕ್ಷಮತೆಯಿಂದ ಬಳಸಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!