26.8 C
Karnataka
Sunday, September 22, 2024

    ಮೈಸೂರು: 700 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣ

    Must read

    ಇಲವಾಲ ಹೋಬಳಿಯ ಕಮರಹಳ್ಳಿ ಭಾಗದಲ್ಲಿ ರೈತರ ಸಹಕಾರ ಪಡೆದು 50:50ರ ಅನುಪಾತದ 700ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ಬಡಾವಣೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದರು.

    ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರ ಉಪಸ್ಥಿತಿಯಲ್ಲಿ ಶನಿವಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

    ಈಗಾಗಲೇ 374ಎಕರೆಯ ಭೂಮಿಯನ್ನು ಪಡೆದುಕೊಂಡಿದ್ದು, ಉಳಿದಿದ್ದನ್ನು ಶೀಘ್ರವಾಗಿ ಪಡೆದುಕೊಳ್ಳಲು ಕ್ರಮವಹಿಸಲಾಗಿದೆ. 15 ದಿನದಲ್ಲಿ ಮತ್ತೆ ಮೈಸೂರಿಗೆ ಭೇಟಿ ನೀಡಿ ಪ್ರತಿಯೊಬ್ಬರ ಸಲಹೆಯನ್ನು ಆಲಿಸಿದ ನಂತರ ತೀರ್ಮಾನವನ್ನು ಕೈಗೊಳ್ಳಲಿದ್ದೆವೆ ಎಂದರು.

    ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿಯೇ ರೈತರ ಸಹಕಾರದೊಂದಿಗೆ .50:50ರ ಅನುಪಾತದಲ್ಲಿ ಬಡಾವಣೆ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದರು.

    ಕಬಿನಿಯಿಂದ ಪ್ರಸ್ತುತ 60ಎಂ.ಎಲ್‌.ಡಿ ನೀರನ್ನು ಮಾತ್ರ ಪಡೆದುಕೊಳ್ಳಲಾಗುತ್ತಿದೆ. ಇನ್ನೂ 90 ಎಂ.ಎಲ್.ಡಿ. ನೀರು ಪಡೆದುಕೊಳ್ಳಲು ಅವಕಾಶವಿದೆ. ಈ ನಿಟ್ಟಿನಲ್ಲಿ 95 ಕೋಟಿ ರೂ. ವೆಚ್ಚದ ಯೋಜನೆ ಜಾರಿಗೆ ಇಂದಿನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಕೊಳ್ಳಲಾಗಿದೆ ಎಂದು ತಿಳಿಸಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!