19.9 C
Karnataka
Sunday, September 22, 2024

    3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ಸಾಯಿಬಾಬಾ ಮಂದಿರದಲ್ಲಿ ವಿಶೇಷ ಅಲಂಕಾರ

    Must read

    ಗುರು ಪೂರ್ಣಿಮೆ ಅಂಗವಾಗಿ ಬೆಂಗಳೂರು ಜೆಪಿ ನಗರದ ಶ್ರೀಸತ್ಯಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷಮಾತ್ರೆ, 10 ಸಾವಿರಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ವಿಶೇಷ ಅಲಂಕಾರಮಾಡಿರುವುದನ್ನು ಕಂಡು ಭಕ್ತಾದಿಗಳು ಪುಳಕಿತರಾದರು

    This image has an empty alt attribute; its file name is UNIQUE-DECORATION-GURU-PURNIMA-PHOTO-1-1024x683.jpg

    ಕರೋನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಹಾಗೂ ವಿಶೇಷವಾದ ಆಲಂಕಾರದಿಂದ ಜನರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿ ಅಲಂಕಾರ ಮಾಡುವ ಯೋಜನೆಯನ್ನು ಕೈಗೆತ್ತುಕೊಳ್ಳಲಾಯಿತು. 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಹಾಗೂ ರೇಷನ್ ಕಿಟ್ ಇರುವಂತಹ ಪದಾರ್ಥಗಳಿಂದ ಅಲಂಕಾರಮಾಡಿದ್ದೇವೆ. ಸುಮಾರು 4 ದಿನಗಳಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀಸತ್ಯ ಸಾಯಿಗಣಪತಿ ದೇವಸ್ಥಾನದ ಟ್ರಸ್ಟಿ ರಾಮಮೋಹನ ರಾಜ್ ತಿಳಿಸಿದರು.

    This image has an empty alt attribute; its file name is UNIQUE-DECORATION-GURU-PURNIMA-PHOTO-2-1024x683.jpg

    ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವೀ ಸೂರ್ಯ ಶ್ಲಾಘಿಸಿದರು. ಲಕ್ಷಾಂತರ ರೂಪಾಯಿಗಳನ್ನು ಖರ್ಚುಗೊಳಿಸಿ ಹಾಳಾಗುವಂತಹ ವಸ್ತುಗಳನ್ನು ಬಳಸಿ ಅಲಂಕಾರ ಮಾಡಿದರೆ ಅದರಿಂದ ಉಪಯೋಗವಾಗುವುದಿಲ್ಲ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಆಲಂಕಾರವೂ ಆಗುತ್ತದೆ ಹಾಗೆಯೇ ನಂತರ ಅದರ ಸದುಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನಆಲೋಚನೆಮಾಡಿರುವ ಮಾಜಿ ಉಪಮಹಾಪೌರರಾದ ರಾಮಮೋಹನರಾಜ್ ಅವರಕಾರ್ಯ ಶ್ಲಾಘನೀಯಎಂದರು.

    This image has an empty alt attribute; its file name is UNIQUE-DECORATION-GURU-PURNIMA-PHOTO-3-1024x683.jpg
    spot_img

    More articles

    2 COMMENTS

    LEAVE A REPLY

    Please enter your comment!
    Please enter your name here

    Latest article

    error: Content is protected !!