21.5 C
Karnataka
Saturday, September 21, 2024

    ಕೋವಿಡ್ ಹಿನ್ನೆಲೆ : ಷರತ್ತುಬದ್ಧ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಿದ ಸರಕಾರ

    Must read

    BENGALURU SEP 5
    ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯ ಸರಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಕೊನೆಗೂ ಷರತ್ತುಬದ್ಧ ಅನುಮತಿ ನೀಡಿದೆ.

    ಐದು ದಿನಗಳ ಗಣೇಶೋತ್ಸವಕ್ಕೆ ಮಾತ್ರ ಅನುಮತಿ ನೀಡಿರುವ ಸರಕಾರವು, ಕೋವಿಡ್‌ ಸೋಂಕು ಇರುವ ಜಿಲ್ಲೆಗಳಲ್ಲೂ ಸಾರ್ವಜನಿಕ ಉತ್ಸವಕ್ಕೆ ಅನುಮತಿ ನೀಡಿದೆ.

    ಭಾನುವಾರ ಸಂಜೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಬ್ಬದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕೋವಿಡ್‌ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ ಎಂದು ಕಂದಾಯ ಸಚಿವ ಆರ್.‌ಅಶೋಕ್‌ ಸಭೆಯ ಬಳಿಕ ತಿಳಿಸಿದರು.

    ಐದು ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ನೀಡಿರುವ ಸರಕಾರವು, ಸ್ಥಳೀಯ ಪೊಲೀಸ್ ಇಲಾಖೆ & ಸ್ಥಳೀಯ ಆಡಳಿತ ಸಂಸ್ಥೆಗಳು ಹೇಳುವ ಎಲ್ಲ ನಿಯಮ, ಷರತ್ತುಗಳನ್ನು ಕಡ್ಡಾಯವಾಗಿ ಪಾಳಿಸಬೇಕು. ಆದರೆ, ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಲಾಗಿದೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!