20.6 C
Karnataka
Sunday, September 22, 2024

    ಮೈಸೂರು ದಸರಾ ಜಂಬೂಸವಾರಿ: ಗಜಪಡೆಗೆ ತಾಲೀಮು

    Must read

    MYSURU SEP 20

    ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜ ಪಡೆಗೆ ಸೋಮಾವಾರ ಭಾರ ಹೊರಿಸಿ ತಾಲೀಮು ನಡೆಸಲಾಯಿತು.

    ದಸರಾದ ಆಕರ್ಷಣೆ ಬಿಂದು ಜಂಬೂ ಸವಾರಿ. ಆದಿನ ಗಜರಾಜ ಅಭಿಮನ್ಯು 750 ಕೆಜಿ ಯೂಕದ ಚಿನ್ನದ ಅಂಬಾರಿಯಲ್ಲಿ ದೇವಿ ಚಾಮುಂಡೇಶ್ವರಿಯ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಗಜಪಡೆಗೆ ಭಾರ ಹೊರಿಸುವ ತಾಲೀಮು ಆರಂಭಿಸಲಾಯಿತು.

    ಮೈಸೂರು ಅರಮನೆ ಆವರಣದಲ್ಲಿ ಆನೆಗಳಿಗೆ ಪೂಜೆ ಸಲ್ಲಿಸಿ, ನಂತರ ಅಭಿಮನ್ಯು ನೇತೃತ್ವದ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ತಾಲೀಮು ನಡೆಸಲಾಯಿತು.ಮೊದಲ ದಿನವಾದ ಸೋಮವಾರ 300 ಕೆಜಿ ತೂಕದ ಮರಣಿನ ಮೂಟೆ ಹುರಿಸಿ ತಾಲೀಮು ನಡೆಸಲಾಯಿತು.

    ಅಭಿಮನ್ಯು, ಧನಂಜಯ, ಗೋಪಾಲಸ್ವಾಮಿ, ಅಶ್ವತ್ಥಾಮ ವಿಕ್ರಮ ಆನೆಗಳಿಗೆ ಮರಳಿನ ಮೂಟೆ ಹೊರಿಸಿ ಅರಮನೆ ಆವರಣದಲ್ಲಿ ತಾಲೀಮು ನಡೆಸಲಾಯಿತು.ಡಿಸಿಎಫ್ ಕರಿಕಾಳನ್, ವೈದ್ಯ ರಮೇಶ್ ಅರಮನೆ, ಎಸಿಪಿ ಚಂದ್ರಶೇಖರ್ ಸೇರಿ ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಿ ಪೂರ್ವಾಭ್ಯಾಸಕ್ಕೆ ಚಾಲನೆ

    ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಸಂಭ್ರಮ ಕಳೆಗಟ್ಟುತ್ತಿದ್ದು, ಅರಮನೆ ಆವರಣದಲ್ಲಿ ಫಿರಂಗಿ ಗಾಡಿಗಳಿಗೆ ಪೂಜೆ ಸಲ್ಲಿಸಿ ಪೂರ್ವಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ಅರಮನೆಯ ಆನೆ ಬಾಗಿಲ ಬಳಿ ಫಿರಂಗಿ ಗಾಡಿಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಲಾಯಿತು. ಚಾಮುಂಡೇಶ್ವರಿ ದೇವಿಯ ಭಾವಚಿತ್ರ ಇರಿಸಿ ಅರ್ಚಕ ಪ್ರಹ್ಲಾದ್ ಪೂಜೆ ನೆರವೇರಿಸಿದರು. ಮೈಸೂರು ನಗರ ಪೆÇಲೀಸ್ ಆಯುಕ್ತ ಚಂದ್ರಗುಪ್ತ, ಅರಣ್ಯಾಧಿಕಾರಿ ಕರಿಕಾಳನ್ ಸೇರಿದಂತೆ ಇತರ ಅಧಿಕಾರಿಗಳು ಪೂಜೆಯಲ್ಲಿ ಭಾಗಿಯಾಗಿದ್ದರು.

    ವಿಜಯದಶಮಿ ಜಂಬೂಸವಾರಿ ಮೆರವಣಿಗೆಯ ದಿನ ಚಿನ್ನದ ಅಂಬಾರಿ ಹೊತ್ತ ಆನೆ ಹೊರಡುವ ವೇಳೆ 21 ಬಾರಿ ಕುಶಾಲತೋಪುಗಳನ್ನು ಸಿಡಿಸಲಾಗುತ್ತದೆ. ಆ ವೇಳೆ ಭಾರೀ ಶಬ್ದ ಹೊರಹೊಮ್ಮುತ್ತದೆ. ಹಾಗಾಗಿ ದಸರಾ ಗಜಪಡೆ ಭಾರೀ ಶಬ್ದಕ್ಕೆ ಹೊಂದಿಕೊಳ್ಳಲೆಂಬ ಉದ್ದೇಶದಿಂದ ಆನೆಗಳು, ಕುದುರೆಗಳ ಸಮ್ಮುಖದಲ್ಲೂ ಕುಶಾಲತೋಪು ಸಿಡಿಸುವ ತಾಲೀಮು ನಡೆಯುತ್ತದೆ. ಅದ್ದರಿಂದ ಕುಶಾಲತೋಪುಗಳನ್ನು ಸಿಡಿಸುವ ಸಲುವಾಗಿ ಮೈಸೂರು ನಗರ ಸಶಸ್ತ್ರ ಮೀಸಲು ಪಡೆಯಿಂದ ಕುಶಾಲತೋಪು ತಾಲೀಮು ನಡೆಸಲಾಯಿತು.

    ಅಧಿಕಾರಿಗಳ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

    ಈ ಬಾರಿ ಸರಳ ದಸರಾ ಆಚರಣೆ ಮಾಡಲು ಉನ್ನತಾಧಿಕಾರ ಸಮಿತಿ ಮತ್ತು ಕಾರ್ಯಕಾರಿ ಸಮಿತಿಯಲ್ಲಿ ತೀರ್ಮಾನಿಸಿದಂತೆ ಆಯೋಜಿಸಲು ಅಧಿಕಾರಿಗಳು ಮಾಡಿಕೊಂಡಿರುವ ಪೂರ್ವಸಿದ್ಧತೆಯನ್ನು ಜಿಲ್ಲಾಧಿಕಾರಿಗಳೂ ಆಗಿರುವ ದಸರಾ ವಿಶೇಷಾಧಿಕಾರಿ ಡಾ. ಬಗಾದಿ ಗೌತಮ್ ಅವರು ಸೋಮವಾರ ಪರಿಶೀಲಿಸಿದರು.

    ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಈಗಾಗಲೇ 6 ಉಪ ಸಮಿತಿಗಳನ್ನು ರಚಿಸಲಾಗಿದೆ. ಈ ಆರು ಸಮಿತಿಗಳು ಕಳೆದ ವರ್ಷ ಮಾಡಿದ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು, ಈ ವರ್ಷ ಮಾಡಬೇಕಾದ ಕೆಲಸಗಳ ಬಗ್ಗೆ ಸಲಹೆ ಸೂಚನೆ ನೀಡಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!