20.6 C
Karnataka
Sunday, September 22, 2024

    ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರಿಗೆ ಆಹ್ವಾನ

    Must read

    ಜಂಬೂ ಸವಾರಿ ವೀಕ್ಷಣೆಗೆ 500 ಮಂದಿಗೆ ಮಾತ್ರ ಅವಕಾಶ

    MYSURU OCT 5

    ನಾಡಹಬ್ಬ ದಸರಾ-Mysuru Dasara- ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ -.Pramoda devi- ಅವರನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ -S T Somashekara ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದರು.

    ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರತಿವರ್ಷದ ಪದ್ಧತಿಯಂತೆ ದಸರಾ ಮಹೋತ್ಸವಕ್ಕೆ ರಾಜಮಾತೆಯವರನ್ನು ಆಹ್ವಾನಿಸಲಾಯಿತು. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು.

    ಅ.7ರಿಂದ 15 ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ಹೇಳಿದರು.

    ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಬೂ ಸವಾರಿ-Jamboo savari- ನಡೆಯಲಿದೆ. ಇದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದ್ದು, ಯಾವರೀತಿ ಅವಕಾಶ ಕಲ್ಪಿಸಬೇಕು ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

    ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ-Pratap Simha- ಶಾಸಕ ಎಲ್.ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಪಾಲಿಕೆ ಆಯುಕ್ತರಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರೆ ಗಣ್ಯರು ಹಾಗೂ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!