23 C
Karnataka
Saturday, September 21, 2024

    NEPಯಿಂದ ಗ್ರಾಹಕರ ಹಿತರಕ್ಷಣೆ ಸಾಧ್ಯ: ಅಶ್ವತ್ಥನಾರಾಯಣ

    Must read

    BENGALURU DEC 31

    ಗ್ರಾಹಕರ ಹಕ್ಕುಗಳು ಮತ್ತು ಅವರ ಹಿತರಕ್ಷಣೆ – ಎರಡೂ ಸಮಾಜದಲ್ಲಿ ಅತ್ಯಂತ ಮುಖ್ಯವಾಗಿದ್ದು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಇವುಗಳಿಗೆ ಒತ್ತು ಕೊಡಲಾಗಿದೆ. ಈ ಮೂಲಕ ಸಮಾಜದಲ್ಲಿ ಪರಿವರ್ತನೆಯ ಗಾಳಿ ಬೀಸುವುದಕ್ಕೆ ಅಗತ್ಯವಾದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

    `ಅಖಿಲ ಭಾರತೀಯ ಗ್ರಾಹಕ ಪಂಚಾಯತಿ’ಯ ರಾಜ್ಯ ಘಟಕವು ಗಿರಿನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ  ಗ್ರಾಹಕ ಜಾಗೃತಿ ಪಕ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬದಲಾವಣೆ ಬರಬೇಕೆಂದರೆ ಅದಕ್ಕೆ ಶಿಕ್ಷಣ ವ್ಯವಸ್ಥೆಯೇ ಆಧಾರಸ್ತಂಭವಾಗಿದೆ; ಹೀಗಾಗಿ ಎನ್ಇಪಿಯಲ್ಲಿ ಸಕಾರಾತ್ಮಕ ಮತ್ತು ಪರಿಪೂರ್ಣ ಬೆಳವಣಿಗೆಗೆ ಗಮನ ಹರಿಸಲಾಗಿದೆ. ಇದರಿಂದ ಪ್ರತಿಯೊಬ್ಬರೂ ಸಮಾಜಕ್ಕೆ ಉತ್ತರದಾಯಿಗಳಾಗಿ ಇರಲಿದ್ದಾರೆ ಎಂದರು.

    ಸಮಾಜದಲ್ಲಿ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ವ್ಯಾಪಾರ ಈ ಐದು ಕ್ಷೇತ್ರಗಳು ಅತ್ಯಂತ ಪ್ರಮುಖವಾಗಿವೆ. ಎಬಿಜಿಪಿ ಸಂಸ್ಥೆಯ ರಾಜ್ಯ ಘಟಕವು ಸಕ್ರಿಯವಾಗಿದೆ. ಆದರೆ, ಒಂದು ವ್ಯವಸ್ಥೆಯಾಗಿ ನಾವು ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವ ವಿಚಾರದಲ್ಲಿ ತುಂಬಾ ಹಿಂದಿದ್ದೇವೆ. ಜನಹಿತದ ಈ ಕಾರ್ಯಕ್ಕೆ ಸಂಘಸಂಸ್ಥೆಗಳು ಕೈಜೋಡಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.

    ಸಮಾಜದ ಬಗ್ಗೆ ಕಳಕಳಿಯುಳ್ಳವರ ಆಗ್ರಹಕ್ಕೆ ಮಣಿದೇ ಸರಕಾರಗಳು ಗ್ರಾಹಕ ರಕ್ಷಣಾ ಕಾಯ್ದೆಯನ್ನು ತಂದಿವೆ. ಸಂಸ್ಥೆಯು ಈ ನಿಟ್ಟಿನಲ್ಲಿ ಯಾವುದಾದರೂ ಯೋಜನೆಯನ್ನು ರೂಪಿಸಿದ್ದರೆ ಸರಕಾರವು ಅದಕ್ಕೆ ಅಗತ್ಯ ಬೆಂಬಲ ನೀಡಲಿದೆ ಎಂದು ಸಚಿವರು ನುಡಿದರು.

    ಸಮಾರಂಭದಲ್ಲಿ ಎಬಿಜಿಪಿ ಅಧ್ಯಕ್ಷ ನಾರಾಯಣಭಾಯ್, ದತ್ತಾತ್ರಿ ನಾಡಿಗೇರ್, ನ್ಯಾಷನಲ್ ಲಾ ಸ್ಕೂಲ್ ಸಂಸ್ಥೆಯ ಡಾ.ಅಶೋಕ್ ಪಾಟೀಲ್, ಡಾ.ಕಿಶೋರ್ ಮುಂತಾದವರು ಉಪಸ್ಥಿತರಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!