21.5 C
Karnataka
Saturday, September 21, 2024

    ಟೆಂಪಲ್ ಟೂರಿಸಂಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಕರೆ

    Must read

    BENGALURU FEB 23
    ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸರ್ಕೂಟ್ ನಿರ್ಮಿಸುವಂತೆ ಮಖ್ಯಮಂತ್ರಿಗಳು ಸೂಚಿಸಿದರು.

    ಅವರು ಇಂದು ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು (Integrated Temple Management System- ಐಟಿಎಂಎಸ್) ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.ದೇವಸ್ಥಾನಗಳಲ್ಲಿ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

    ಐಟಿಎಂಎಸ್ ನ್ನು ಜಾರಿಗೆ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ದೇವಸ್ಥಾನಗಳ ನಿರ್ವಹಣೆ ಬಹಳ ಮುಖ್ಯ. ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಮುಂತಾದವುಗಳನ್ನು ದಾಖಲಿಸುವ ಪ್ರಯತ್ನವಾಗಬೇಕು. ದೇವಸ್ಥಾನಗಳ ಆಸ್ತಿಗಳ ನಿರ್ವಹಣೆಯನ್ನು ಅತ್ಯಂತ ಸಮರ್ಪಕವಾಗಿ ಮಾಡುವ ಅಗತ್ಯವಿದೆ ಎಂದರು.

    ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮಾಡಿ , ಪೂರ್ಣಪ್ರಮಾಣದಲ್ಲಿ ಸ್ಥಳೀಯವಾಗಿ ವ್ಯವಸ್ಥೆ ಮಾಡಿ ಆಡಳಿತ ಸುಧಾರಿಸುವ ಅಗತ್ಯವಿದೆ. ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವುದರಿಂದ ನಿರ್ವಹಣೆಯ ಜೊತೆಗೆ ನಿಯಂತ್ರಣವೂ ಅಗತ್ಯ ಎಂದರು. ದೇವಸ್ಥಾನಗಳ ಅರ್ಚಕರು ಹಾಗೂ ಪೂಜಾರಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ದೇವಸ್ಥಾನಗಳ ಸ್ವಚ್ಛತೆಗೆ ಆದ್ಯತೆ:ದೇವಸ್ಥಾನಗಳ ಸ್ವಚ್ಥತೆಯನ್ನು ಕಾಪಾಡಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳು ದೇವಸ್ಥಾನಗಳ ಆವರಣಗಳ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಎಸ್ ಎ ರಾಮದಾಸ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಮೊದಲಾದವರು ಉಪಸ್ಥಿತರಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!