21.2 C
Karnataka
Sunday, September 22, 2024

    ನಾಳೆ ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 115ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ

    Must read

    TUMAKURU MAR 31

    ಪರಮಪೂಜ್ಯ ಡಾ|| ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳ 115ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವ ನಾಳೆ ನಡೆಯಲಿದ್ದು, ನಾಡಿಗೆ ಒಳ್ಳೆಯ ಸಂದೇಶವನ್ನು ಸಾರುವ ಅರ್ಥಪೂರ್ಣ ಕಾರ್ಯಕ್ರಮವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

    ಶ್ರೀಗಳ ಬದುಕಿನಿಂದ ದೊರೆತಿರುವ ಪ್ರೇರಣೆಯ ಆಚರಣೆ ಇದಾಗಿದ್ದು, ಇಂದಿನ ಪೀಳಿಗೆಗೆ ಶ್ರೀಗಳ ವಿಚಾರಗಳನ್ನು ತಿಳಿಸುವ ಅರ್ಥಪೂರ್ಣ ಕಾರ್ಯಕ್ರಮವಾಗಲಿದೆ. ಶ್ರೀ ಸಿದ್ಧಗಂಗಾ ಮಠದ ಶಿಕ್ಷಣ ಹಾಗೂ ದಾಸೋಹ ಪರಂಪರೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಷಾ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭಕ್ತಾದಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪೂರ್ವಭಾವಿ ತಯಾರಿಗಳ ಬಗ್ಗೆ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ ಚರ್ಚಿಸಿರುವುದಾಗಿ ತಿಳಿಸಿದರು.

    ರಾಜ್ಯದಲ್ಲಿ ಸಾಮರಸ್ಯ ಕೆಡದಂತೆ ಕ್ರಮಸಿಎಂ ಬಸವರಾಜ ಬೊಮ್ಮಾಯಿ
    ರಾಜ್ಯದಲ್ಲಿ ಸಾಮರಸ್ಯ ಕೆಡದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಸರ್ಕಾರ ಸಮವಸ್ತ್ರ ಪ್ರಕರಣ ಸೇರಿದಂತೆ ಎಲ್ಲ ವಿಚಾರಗಳನ್ನು ದಕ್ಷ ರೀತಿಯಲ್ಲಿ ನಿಭಾಯಿಸಿದೆ ಎಂದು ಹಿಂದೂಪರ ಸಂಘಟನೆಗಳ ಕಾರ್ಯಗಳನ್ನು ಭಾಜಪ ಪಕ್ಷ ತಡೆಯುವುದೆ ಎಂಬ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ನೀಡಿರುವ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!