24.6 C
Karnataka
Wednesday, September 25, 2024

    ದೇವರನ್ನು ತೋರಿಸಿದ ಸನ್ಯಾಸಿ

    Must read

    ಒಂದು ದಿನ ಒಬ್ಬ ಸನ್ಯಾಸಿಯು ನದಿ ತೀರದಲ್ಲಿ ಧ್ಯಾನ ಮಾಡುತ್ತಿದ್ದರು.ಒಬ್ಬ ಯುವಕ ಅವರ ಬಳಿಗೆ ಬಂದು ಅವರ ಧ್ಯಾನಕ್ಕೆ ಅಡಚಣೆಯನ್ನು ಉಂಟು ಮಾಡಿ , “ಗುರುಗಳೆ ನಾನು ನಿಮ್ಮ ಶಿಷ್ಯನಾಗಲು ಬಯಸುತ್ತಿದ್ದೇನೆ” ಎಂದು ಹೇಳಿದ.ಆಗ ಆ ಸನ್ಯಾಸಿಯು “ಏಕೆ?” ಎಂದು ಕಾರಣ ಕೇಳಿದರು.

    ಆ ಯುವಕ ನಾನು ದೇವರನ್ನು ಹುಡುಕುತ್ತಿದ್ದೇನೆ ಎಂದು ಹೇಳುತ್ತಾನೆ.

    ಗುರುಗಳು ಏಕಾಏಕಿ ಜಿಗಿದು ನಿಂತರು. ಆ ಯುವಕನ ಕತ್ತನ್ನು ಹಿಡಿದುಕೊಂಡು, ಎಳೆದು ತಂದು, ನದಿಯಲ್ಲಿ ಬಿಡುತ್ತಾರೆ. ಅವನ ತಲೆಯನ್ನು ಹಿಡಿದುಕೊಂಡು ನೀರಿನೊಳಗೆ ಮುಳುಗಿಸುತ್ತಾರೆ. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸುತ್ತಾರೆ. ಅವನಿಗೆ ಉಸಿರು ಕಟ್ಟಿದಂತಾಗುತ್ತದೆ. ಆನಂತರ ಆ ತೊಂದರೆಯಿಂದ ಸುಧಾರಿಸಿಕೊಳ್ಳಲು ಅವನಿಗೆ ಅವಕಾಶ ನೀಡುತ್ತಾರೆ.

    ನಂತರ ಆ ಸನ್ಯಾಸಿಯು ಆ ಯುವಕನನ್ನು ನದಿಯಿಂದ ಎಳೆದು ಹೊರ ತರುತ್ತಾರೆ. ಆ ನೀರಿನಿಂದಾಗಿ ಆ ಯುವಕನಿಗೆ ಉಸಿರು ಕಟ್ಟಿದಂತಾಗುತ್ತದೆ. ಉಸಿರಾಡಲು ಕಷ್ಟವಾಗಿ ಕೆಮ್ಮುತ್ತಿರುತ್ತಾನೆ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಹೇಳುತ್ತಾರೆ :“ಈಗ ಹೇಳು.. ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು..??”

    ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ..

    “ಚೆನ್ನಾಗಿದೆ.. ಈಗ ಮನೆಗೆ ಹೋಗು.. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ಹೇಳುತ್ತಾರೆ ಆ ಸನ್ಯಾಸಿ.

    ಆಪತ್ಕಾಲದಲ್ಲಿ ಒದಗುವವರೆ ದೇವರು ಎಂಬುದರ ಅರಿವು ಯುವಕನಿಗೆ ಆಗುತ್ತದೆ.

    M V Shanaakarananda
    M V Shanaakarananda
    ಎಂ.ವಿ. ಶಂಕರಾನಂದ ಅವರು ಕನ್ನಡದ ಪ್ರತಿಷ್ಠಿತ ಪ್ರಕಾಶನ ಸಂಸ್ಥೆ ಸಪ್ನಬುಕ್‌ಹೌಸಿನಲ್ಲಿ ಸಂಪಾದಕರಾಗಿ, ಚೆನ್ನೈನ ಪ್ರಕಾಶನ ಸಂಸ್ಥೆ ಸುರಾ ಬುಕ್ಸ್ (ಪ್ರೈ)ಲಿ.ನಲ್ಲಿ ವ್ಯವಸ್ಥಾಪಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡದಲ್ಲಿ ಐವತ್ತಕ್ಕೂ ಹೆಚ್ಚಿನ ಸ್ವತಂತ್ರ, ಅನುವಾದ, ಸಂಪಾದನಾ ಕೃತಿಗಳ ರಚನೆ ಇವರ ಹೆಗ್ಗಳಿಕೆ. ಮಧುಗಿರಿ, ಗೌರಿಬಿದನೂರು ತಾಲ್ಲೂಕು ರಾಜ್ಯೋತ್ಸವ ಪ್ರಶಸ್ತಿ, ಚಿಕ್ಕಬಳ್ಳಾಪುರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಓಂಶಕ್ತಿ ಸಾಹಿತ್ಯ ಪ್ರಶಸ್ತಿ ಮತ್ತು ಹೇಮಂತ ಸಾಹಿತ್ಯ ಪುರಸ್ಕಾರಗಳನ್ನು ಪಡೆದಿರುವ ಇವರು ಹಲವು ರಾಜ್ಯಮಟ್ಟದ, ಪ್ರಾದೇಶಿಕ ಪತ್ರಿಕೆಗಳ ಅಂಕಣಕಾರರೂ ಆಗಿದ್ದಾರೆ. 2022 ನೇ ಸಾಲಿನ ತುಮಕೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ
    spot_img

    More articles

    1 COMMENT

    LEAVE A REPLY

    Please enter your comment!
    Please enter your name here

    Latest article

    error: Content is protected !!