26.4 C
Karnataka
Wednesday, April 23, 2025
    Home Blog Page 27

    ಶಿಲ್ಪಕಲಾ ಚತುರ ಅಮಿತ್ ಮಂಜುನಾಥ್ ನಾಯಕ

    ಬಳಕೂರು ವಿ ಎಸ್ ನಾಯಕ

    ಬಾಲ್ಯದಿಂದಲೇ ಅಪಾರವಾದಂತಹ ಕಲಾಸಕ್ತಿ. ಕಲೆಯಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವಂತಹ ಅಚಲ ಗುರಿ. ಬಾಲ್ಯದಲ್ಲಿಯೇ ತನ್ನ ಮನಸ್ಸಿಗೆ ಬಂದದ್ದನ್ನು ಗೀಚಿ ಸಂಭ್ರಮಿಸಿದ ಪರಿ. ಶಾಲೆಯಲ್ಲಿರುವಾಗ ತನಗೆ ತೋಚಿದ್ದನ್ನು ಕ್ಷಣಾರ್ಧದಲ್ಲಿಯೇ ಬರೆದು ನಮ್ಮ ಅಧ್ಯಾಪಕರಿಗೆ ತೋರಿಸಿ ಅವರಿಂದ ಪ್ರಶಂಸೆಗೆ ಒಳಗಾಗಿತ್ತು. ಹೀಗೆ ಬಾಲ್ಯದಲ್ಲಿಯೇ ಅರಳಿದ ಕಲಾಸಕ್ತಿ ನಂತರ ಹೆಮ್ಮರವಾಗಿ ತನ್ನ ಕಲಾ ಪಯಣದ ಕಡೆಗೆ ಸಾಗುವಂತೆ ಮಾಡಿದ್ದಂತೂ ಸತ್ಯ. ಅದ್ಭುತ ಕಲಾಸಕ್ತಿಯನ್ನು ಹೃದಯಾಂತರಾಳದಲ್ಲಿ ಬಚ್ಚಿಟ್ಟುಕೊಂಡು ನಂತರದ ದಿನಗಳಲ್ಲಿ ಶಿಲ್ಪಕಲೆಯ ಮಾಧ್ಯಮ ಮೂಲಕವಾಗಿ ಎಲ್ಲರ ಗಮನವನ್ನು ಸೆಳೆಯುವಂತೆ ಮಾಡಿದವರು ಶಿಲ್ಪ ಕಲಾವಿದ ಅಮಿತ್ ಮಂಜುನಾಥ್ ನಾಯಕ .

    ಇವರು ಮೂಲತಹ ಮಲೆನಾಡಿನವರು. ನಮಿತಾ ನಾಯಕ್ ಮತ್ತು ಮಂಜುನಾಥ್ ನಾಯಕರವರ ಪುತ್ರ. ಬಾಲ್ಯದಿಂದಲೇ ಇವರ ಕಲಾ ಪ್ರತಿಭೆಯನ್ನು ಗುರುತಿಸಿದ ಇವರ ತಂದೆ ತಾಯಿ ನಂತರ ಇವನನ್ನು ಚಿತ್ರಕಲಾ ಮಹಾವಿದ್ಯಾಲಯ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಕಲಾ ಅಧ್ಯಯನಕ್ಕಾಗಿ ಸೇರಿಸಿದರು. ಆದರೆ ಅಲ್ಲಿ ಹೋದ ಅವರಿಗೆ ವಿವಿಧ ಕಲಾ ಪ್ರಕಾರಗಳು ಆಕರ್ಷಿಸಿದವು. ಕಲಾತ್ಮಕವಾಗಿ ಏನಾದರೂ ಚಿತ್ರಿಸಬೇಕು ವಿಶೇಷವಾದಂತಹ ಶಿಲ್ಪಗಳನ್ನು ರಚಿಸಬೇಕು ತನ್ನದೇ ಆದಂತಹ ಭಾವನಾತ್ಮಕವಾದ ವಿಚಾರಗಳನ್ನು ಬಿಂಬಿಸಿ ಶಿಲ್ಪ ಮತ್ತು ಚಿತ್ರಕಲೆಗಳಲ್ಲಿ ಅದನ್ನು ತೋರ್ಪಡಿಸಬೇಕು ಎಂಬ ವಿಚಾರ ಅಂದೇ ಆರಂಭವಾಯಿತು. ನಂತರ ಶಿಲ್ಪಕಲೆಯನ್ನು ಆಯ್ಕೆಮಾಡಿಕೊಂಡ ಅವರು ಶಿಲ್ಪಕಲೆಯಲ್ಲಿ ಯಾರಿಗೂ ಕೂಡ ನಿಲುಕದ ವಿಶೇಷವಾದ ಶಿಲ್ಪಗಳನ್ನು ರಚಿಸುವುದರ ಮೂಲಕವಾಗಿ ಚಿಕ್ಕವಯಸ್ಸಿನಲ್ಲಿ ಅದ್ಭುತವಾದ ಕಲಾ ಸಾಧನೆ ಮಾಡಿರುವುದು ನಿಜವಾಗಿಯೂ ಕೂಡ ಮೆಚ್ಚ ಬೇಕಾದ ವಿಷಯ.

    ಒಬ್ಬ ಕಲಾವಿದ ಆದವನಿಗೆ ಗುರಿ ಇದ್ದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಅಮಿತ್ ರವರ ಶಿಲ್ಪಕಲಾಕೃತಿಗಳು ಸಾಕ್ಷಿ . ಇವರ ಈ ಶಿಲ್ಪಕಲಾಕೃತಿಗಳನ್ನು ನಾವು ನೋಡಿದಾಗ ನಮ್ಮ ಸಮಾಜದಲ್ಲಿ ಹಲವಾರು ರೀತಿಯ ವಿಚಾರಗಳು ಅದರ ಜೊತೆಗೆ ಮನುಷ್ಯನ ಅನುಭವ ನೋವು ದುಃಖ ಸಾಧನೆ ಸಂತೋಷಎಲ್ಲಾ ಭಾವನೆಗಳನ್ನು ಇವರ ಶಿಲ್ಪಗಳಲ್ಲಿಕಾಣ ಬಹುದಾಗಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪದವಿಯನ್ನು ಪಡೆದಿರುವ ಇವರಿಗೆ ಇವರ ಕಲಾ ಸಾಧನೆಯನ್ನು ಗಮನಿಸಿ ಲಲಿತಕಲಾ ಅಕಾಡೆಮಿ ಇಂದ ರಾಜ್ಯಪ್ರಶಸ್ತಿ. ಹೀಗೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ರಾಷ್ಟ್ರಮಟ್ಟದಲ್ಲಿ ನಡೆದ ಆನ್ಲೈನ್ ಕಲಾಪ್ರದರ್ಶನದಲ್ಲಿ ಪಾಲ್ಗೊಂಡು ಒಳ್ಳೆಯ ಹೆಸರನ್ನು ಮಾಡಿದ್ದಾರೆ ಇವರ ಅದ್ಭುತ ಕಲಾ ಸೇವೆಗೆ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ ಇಂತಹ ಶಿಲ್ಪ ಕಲಾವಿದರನ್ನು ನಾವು ಕೂಡ ಗೌರವಿಸೋಣ.

    This image has an empty alt attribute; its file name is V-S-NAIK.jpg

    ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಉಪನ್ಯಾಸಕರಾಗಿರುವ ವಿ. ಎಸ್ . ನಾಯಕರ ಪೂರ್ಣ ಹೆಸರು ವೆಂಕಟದಾಸ್ ಎಸ್ . ನಾಯಕ. ನಾಡಿನ ಅನೇಕ ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ. ಅನೇಕ ಸಂಸ್ಥೆಗಳಲ್ಲಿ ಕಾರ್ಯಕ್ರಮ ಸಂಯೋಜಕರಾಗಿಯೂ ಪರಿಚಿತರು. ದೂರದರ್ಶನದಲ್ಲಿ ಗಾಂಧೀ ವಿಚಾರಧಾರೆ ಕುರಿತು ಅನೇಕ ಉಪನ್ಯಾಸಗಳನ್ನು ನೀಡಿದ್ದಾರೆ. ಹಲವಾರು ಸಂಸ್ಥೆಗಳ ಪುರಸ್ಕಾರಕ್ಕೂ ಪಾತ್ರರಾಗಿದ್ದಾರೆ.

    ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ , ಪ್ರಖರ ಚಿಂತಕ ಸಾವರ್ಕರ್ ನೆನಪು

    ಇವತ್ತು ಫೆಬ್ರವರಿ 26. 1966 ರ ಇದೇ ದಿನ ಸಾವರ್ಕರ್ ಅವರ ನಿಧನ. ಅವರ ಹೋರಾಟ,ಅದಕ್ಕೆ ಬಳಸಿಕೊಂಡ ತಂತ್ರಗಳು, ವಾಕ್ ಚತುರತೆ, ಬರಹ, ಪ್ರತಿಪಾದಿಸಿದ ನಿಲುವುಗಳು, ಅದಕ್ಕಾಗಿ ಅನುಭವಿಸಿದ ಕಠಿಣ ಶಿಕ್ಷೆ, ಆಗಿನ ಅವರ ಸಮಕಾಲಿಗಳ ಜೊತೆಗಿನ ಸಿದ್ದಾಂತ ಭೇದ ಎಲ್ಲವೂ ಯಾಕೋ ನೆನಪಾದವು. ಇಂತಹ ಎಷ್ಟೋ ಮಹನೀಯರ ಜೀವನ ಚರಿತ್ರೆ ನಮ್ಮ ಇತಿಹಾಸದ ಪುಟಗಳಲ್ಲಿ ಇದ್ದು, ಇವತ್ತಿಗೂ ಅವರವರ ಅನುಯಾಯಿಗಳಿಗೆ ಪ್ರೇರಕರಾಗಿದ್ದಾರೆ. ಎಲ್ಲರೂ ಒಂದಲ್ಲ ಒಂದು ಕಾರಣಗಳಿಗೆ ಇಂದಿಗೂ ಪ್ರಸ್ತುತರಾಗುತ್ತಾರೆ. ಇಂತವರು ಸತ್ತರು ಎನ್ನಲು ಆಗಲ್ಲ. ಅವರ ಭೌತಿಕ ಶರೀರ ಪ್ರಕೃತಿ ಧರ್ಮವನ್ನು ಅನುಸರಿಸಿ ನಶಿಸಲೇ ಬೇಕು, ನಶಿಸಿದೆ ಕೂಡಾ.

    ಬುದ್ಧನಿಂದ ಹಿಡಿದು, ಬಸವಣ್ಣ ಮತ್ತು ನಮ್ಮ ತಲೆಮಾರುಗಳ ಗಾಂಧಿ ತನಕದ ಮಹಾನ್ ಚೇತನಗಳ ಸಾವು ದುರಂತದಲ್ಲಿ ಆಗಿರುವುದು ನಮಗೆ ಅಭಿಪ್ರಾಯ ಭೇದಗಳು ಹಿಂಸೆಯಲ್ಲಿ ಪರ್ಯಾವಸಾನ ಗೊಂಡಿರುವುದನ್ನು ತಿಳಿಸುತ್ತವೆ. ಭಾರತದಲ್ಲೇ ಅಲ್ಲ, ಇಡೀ ಪ್ರಪಂಚದಲ್ಲಿ ಅದು ಸಾಮಾನ್ಯವೇನೋ ಅನ್ನುವಷ್ಟು ಇತಿಹಾಸದ ತುಂಬಾ ಅಂತಹ ಉಲ್ಲೇಖಗಳು ಇವೆ. ಹಾಗೆ ದುರಂತ ಸಾವನ್ನು ಹುತಾತ್ಮರು ಅನ್ನುವ ಮೂಲಕ ಅವರ ದಿವ್ಯ ಚೇತನಗಳನ್ನು ಇಂದಿಗೂ ಜೀವಂತವಾಗಿ ಇಡುವ ಕೆಲಸಗಳೂ ಆಗುತ್ತಿವೆ. ಅದು ಅವರಿಗೆ ಕೊಡುವ ಗೌರವವೂ ಹೌದು. ಕೃತಜ್ಞ ಸಮಾಜ ಪಾಲಿಸಬೇಕು ಸಹಾ.

    ಶಾಂತಿ ಮಾರ್ಗದ ಗಾಂಧೀಜಿ ಸಾವು ದುರಂತದಲ್ಲಿ ಆದರೆ, ಕ್ರಾಂತಿಯ ಮಾರ್ಗವನ್ನು ಪ್ರತಿಪಾದಿಸಿದ ಸಾವರ್ಕರ್ ಸಾವು ವಿಚಿತ್ರವಾಗಿದೆ ಮತ್ತು ಶೋಚನೀಯವಾಗಿದೆ! ಅಭಿಪ್ರಾಯ ಭೇದಗಳನ್ನು ಗೌರವಿಸಬೇಕು, ಅದು ನಮ್ಮ ವಿರುದ್ಧ ಇದ್ದವರದ್ದು ಆದರೂ ಸರಿ ಎಂದು ಬ್ರಿಟಿಷ್ ಸರ್ಕಾರ ತನ್ನ ರಾಣಿಯ ಪಟ್ಟಾಭಿಷೇಕದ ನೆಪಮಾಡಿ ಭಾರತದಲ್ಲಿ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿ, ಪಟ್ಟಿ ತಯಾರಿಸುತ್ತದೆ. ಅದರಲ್ಲಿ ಸಾವರ್ಕರ್ ಸಹೋದರರ (ಗಣೇಶ್,ವಿನಾಯಕ) ಹೆಸರು ಇಲ್ಲದ್ದು ನೋಡಿ ಮತ್ತೊಬ್ಬ ಸಹೋದರ (ನಾರಾಯಣ ಸಾವರ್ಕರ್) ಗಾಂಧೀಜಿ ನೆರವು ಕೋರುತ್ತಾರೆ.

    ಗಾಂಧೀಜಿ 1915ರಲ್ಲಿ ದ.ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದರು. 1911 ರಲ್ಲಿ ಸಾವರ್ಕರ್ ಅವರಿಗೆ ಎರೆಡೆರೆದು ಜೀವಾವಧಿ ಕಠಿಣ ಶಿಕ್ಷೆ ವಿಧಿಸಿ ಆಗಿತ್ತು. ಅಲ್ಲಿಗಾಗಲೇ 10 ವರ್ಷ ಕಠಿಣ ಕಾಲಿಪಾನಿ ಶಿಕ್ಷೆ ಯನ್ನು ಅಂಡಮಾನಿನಲ್ಲಿ ಸಾವರ್ಕರ್ ಅನುಭವಿಸಿರುತ್ತಾರೆ. 1909 ರಲ್ಲಿಯೇ ಸಾವರ್ಕರ್ ಗಾಂಧಿಯನ್ನು, ಅವರ ಮಾರ್ಗವನ್ನು ಟೀಕಿಸಿ ಮಾತಾಡಿರುತ್ತಾರೆ, ಅಷ್ಟೇ ಅಲ್ಲ ಕಸ್ತೂರ್ ಬಾ ಅವರ ಮರಣದ ನೆನಪಲ್ಲಿ ಗಾಂಧಿ ಸಂಗ್ರಹಿಸುತ್ತಿದ್ದ ಹುಂಡಿಯ ಹಣವನ್ನು ಕೊಡಲೂ ನಿರಾಕರಿಸಿರುತ್ತಾರೆ. ಅಷ್ಟೊಂದು ಅಭಿಪ್ರಾಯ ಭೇದವಿದ್ದರೂ ಗಾಂಧಿ ಸಾವರ್ಕರ್ ಸಹೋದರನಿಗೆ, ನಾನು ನಿಮಗೆ ಸಹಾಯ ಮಾಡೋವಷ್ಟು ಇಲ್ಲದಿದ್ದರೂ ಒಂದು ಸಲಹೆ ಕೊಡ್ತೀನಿ. ನೀವು ಅವರು ಮಾಡಿರುವ ಎಲ್ಲ ಕೃತ್ಯಗಳೂ ರಾಜಕೀಯ ಪ್ರೇರಿತವೇ ವಿನಾ ವೈಯಕ್ತಿಕ ಅಲ್ಲ ಅಂತ ಬ್ರಿಟಿಷ್ ಸರ್ಕಾರಕ್ಕೆ ಮನವರಿಕೆ ಮಾಡಿ ಅಂದಿದ್ದರು. ಅಷ್ಟೇ ಅಲ್ಲ ಇದೇ ಫೆಬ್ರವರಿ 26,1920 ರ ತಮ್ಮ ವಾರಕ್ಕೊಮ್ಮೆ ಹೊರಬರುತ್ತಿದ್ದ ಯಂಗ್ ಇಂಡಿಯಾ ದಲ್ಲಿ ಇದರ ಬಗ್ಗೆ ಬರೆಯುತ್ತಾರೆ ಕೂಡ.

    ಇವರಿಗೆ ವೀರ ಸಾವರ್ಕರ್ ಅಂತ ಬಿರುದು ಕೊಟ್ಟದ್ದು ಭಗತ್ ಸಿಂಗ್! ಅಷ್ಟೊಂದು ಕ್ರಾಂತಿಬಣಕ್ಕೆ ಇವರು ಸ್ಫೂರ್ತಿದಾಯಕರಾಗಿರುತ್ತಾರೆ. ಭಗತ್ ಸಿಂಗ್ ರನ್ನು ಗಾಂಧಿ ಉಳಿಸಬಹುದಿತ್ತು, ಹಾಗೆ ಮಾಡಲಿಲ್ಲ ಅನ್ನೋದು ಇವತ್ತಿಗೂ ಒಂದು ವರ್ಗದ ವಾದ. ಸಾವರ್ಕರ್ ಹೇಡಿ, ಬ್ರಿಟಿಷರಿಗೆ ಕ್ಷಮಾ ಭಿಕ್ಷೆ ಬೇಡಿದ್ದರು ಅಂತ ಮತ್ತೊಂದು ವರ್ಗದ ವಾದ. ಒಂದೇ ಗುರಿಗೆ ಎರಡು ದಾರಿಗಳಲ್ಲಿ ಇಂತಹ ಅಭಿಪ್ರಾಯ ಭೇದ ಸಾಮಾನ್ಯ.

    ಇಂತಹ ಅಭಿಪ್ರಾಯ ಭೇದದ ಪರಮೋಚ್ಚತೆ ಏನೋ ಎಂಬಂತೆ ಗಾಂಧಿ ಹತ್ಯೆಯ ದುರಂತದಲ್ಲಿ ಸಾವರ್ಕರ್ ದೋಷಿತರು ಅಂತ ಸ್ವತಂತ್ರ ಭಾರತದ ಸರ್ಕಾರ ಆರೋಪಿಸಿ, ಕಟಕಟೆಯಲ್ಲಿ ನಿಲ್ಲಿಸಿ ಬಿಡುತ್ತೆ! ಸಾವರ್ಕರ್ ತುಂಬಾ ನೊಂದು ಬಿಡುತ್ತಾರೆ. ನಿರ್ದೋಷಿ ಅಂತ ಸಾಬೀತಾಗಿ ಬಂದರೂ 1964 ರಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗ್ತಾರೆ. ಮಹಾಮೌನಕ್ಕೆ ಶರಣಾಗಿ ಬಿಡ್ತಾರೆ. ಅಂದಿನ ವಿದ್ಯಾಮಾನಗಳು ಅವರನ್ನ ಯಾವ ಪರಿ ಹಿಂಸಿಸಿದ್ದವು ಅಂದ್ರೆ, ಫೆಬ್ರವರಿ 1,1966 ರಿಂದ ಊಟ, ನೀರು,ನಿದ್ರೆ ಬಿಟ್ಟು 26 ಕ್ಕೆ ಪ್ರಾಣವನ್ನೂ ಬಿಡ್ತಾರೆ!

    ಇಡೀ ಬ್ರಿಟಿಷ್ ಸರ್ಕಾರವನ್ನು ಅಲುಗಾಡಿಸಿದ ಮಹಾನ್ ಹೋರಾಟಗಾರ, ತನ್ನ ವೈಖರಿ,ಲೇಖನಿಯಿಂದ ಸಾವಿರಾರು ಕ್ರಾಂತಿಕಾರಿಗಳಿಗೆ ಜನ್ಮ ನೀಡಿ ಹುತಾತ್ಮರನ್ನಾಗಿಸಿದ ಸಾವರ್ಕರ್, ಅನ್ನ ನೀರು ಬಿಟ್ಟು ಸಾವನ್ನಪ್ಪಿದರು ಅಂತ ಓದುವಾಗ ಅವ್ಯಕ್ತ ವೇದನೆ ಆಗುತ್ತದೆ. ತನ್ನದೇ ಜನ ತನ್ನನ್ನು ನಡೆಸಿಕೊಂಡ ರೀತಿಗೆ ಝರ್ಝರಿತರಾಗಿ ಬಿಡ್ತಾರೆ. ಯಾಕೋ ಸಾವು ಕೂಡಾ ಸಾವರ್ಕರ್ ಅವರಿಗೆ ಅಗೌರವ ತೋರಿ ದುರಂತ ನಾಯಕನನ್ನಾಗಿ ಮಾಡಿ ಬಿಡ್ತೇನೋ ಅಂತ ಅನ್ನಿಸಿ ಬಿಡ್ತು.

    ಹೌದು ಊರೆಲ್ಲಾ ಒಂದಾದ್ರು ಹೋರಾಡಬಹುದು, ಮನೆಯವರೇ ಎದುರಾದ್ರೆ ಸ್ಥೈರ್ಯ ಕುಂದಿ ಬಿಡುತ್ತದೆ !

    Co Operative Movement: ರಾಷ್ಟ್ರದ ಆರ್ಥಿಕತೆಗೆ ಪೋಷಕವಾಗಿರುವ ವ್ಯವಸ್ಥೆಯನ್ನು ದುರ್ಬಲಗೊಳಿಸಬಾರದು – ಜಿ.ಟಿ. ದೇವೇಗೌಡ


    BENGALURU FEB 25
    ರಾಷ್ಟ್ರದಾದ್ಯಂತ ವೇಗವಾಗಿ ಬೆಳೆಯುತ್ತಿರುವ ಸಹಕಾರ ಚಳವಳಿಯ ಬಗ್ಗೆ ಅಪಪ್ರಚಾರ ಸಲ್ಲದು. ರಾಷ್ಟ್ರದ ಅರ್ಥವ್ಯವಸ್ಥೆಗೆ ಪೋಷಕವಾಗಿರುವ ಸಹಕಾರಿ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳನ್ನು ಮಾಡಬಾರದೆಂದು ಶಾಸಕರು, ಮಾಜಿ ಸಚಿವರು, ಸಹಕಾರಿ ಮುಖಂಡರೂ ಆದ ಜಿ.ಟಿ. ದೇವೇಗೌಡರು ಮನವಿ ಮಾಡಿಕೊಂಡಿದ್ದಾರೆ.

    ಅವರು ಇತ್ತೀಚಿನ ದಿನಗಳಲ್ಲಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಬಗ್ಗೆ ಭಾರವಾದ ಹೃದಯದಿಂದ ಪ್ರತಿಕ್ರಿಯಿಸಿದ್ದಾರೆ. ಅವರು ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಸಹಕಾರ ಕ್ಷೇತ್ರದ ಬಗ್ಗೆ ತಮಗಿರುವ ಕಳಕಳಿಯನ್ನು ವ್ಯಕ್ತ ಮಾಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸಹಕಾರ ಸಂಘಗಳ ಬಗೆಗಿನ ವರದಿ ಬಗ್ಗೆ ತುಂಬಾ ಚಿಂತಿತನಾಗಿದ್ದೇನೆ. ವರದಿಗಳ ಬಗ್ಗೆ ಮಾಧ್ಯಮಗಳನ್ನು ನಾನು ಖಂಡಿತ ಆಕ್ಷೇಪಿಸುತ್ತಿಲ್ಲ. ಅವರ ಕೆಲಸ, ದಕ್ಷತೆ ಬಗ್ಗೆ ತುಂಬಾ ಮೆಚ್ಚುಗೆ ಇದೆ. ಆದರೆ ಪ್ರಮುಖ ದೈನಿಕವೊಂದರಲ್ಲಿ ಪ್ರಕಟವಾದ ವರದಿ ನನಗೆ ನೋವು ತಂದಿದೆ ಎಂದು ಅವರು ಹೇಳಿದ್ದಾರೆ.

    ವಿಶ್ವ ಮನ್ನಣೆಗಳಿಸಿದ ಸಹಕಾರ

    ಭಾರತದಲ್ಲಿ ಸಹಕಾರಿ ಚಳವಳಿ ಆರ್ಥಿಕ ವ್ಯವಸ್ಥೆಯ ಆಶ್ರಯದ ಬಂಡೆಯಂತಿದೆ. ಸಮತಾವಾದ, ಬಂಡವಾಳಶಾಹಿ ನಡುವಿನ ಸುವರ್ಣ ಮಾಧ್ಯಮ ಎನಿಸಿಕೊಂಡಿದೆ. ಕೃಷಿ ಕ್ರಾಂತಿ, ಶ್ರೇತ ಕ್ರಾಂತಿಯ ಶಿಲ್ಪಿ ಆಗಿದೆ. ಅಮೂಲ್, ಇಫ್ಕೋ, ಕ್ರಿಬ್ಕೋ ಸಂಸ್ಥೆಗಳು ವಿಶ್ವ ಮನ್ನಣೆ ಗಳಿಸಲು ಕಾರಣವೆನಿಸಿದೆ.

    ಅಪಪ್ರಚಾರದ ಪ್ರಭಾವ ಎಷ್ಟೇ ಇದ್ದರೂ ಇತ್ತೀಚಿನ ವರ್ಷಗಳಲ್ಲಿ ಸಹಕಾರ ವ್ಯವಸ್ಥೆಯ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚುತ್ತಿರುವುದನ್ನು, ಹಾಗೆಯೇ ಜನತೆ ಜಾಗೃತರಾಗುತ್ತಿರುವುದನ್ನು ಕಾಣಬಹುದಾಗಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಹಕಾರ ಕ್ಷೇತ್ರದ ಬೆಳವಣಿಗೆ, ಸಾಧನೆ ಬಗ್ಗೆ ಹೊಟ್ಟೆಕಿಚ್ಚಿನಿಂದ ತಪ್ಪು ಮಾಹಿತಿಗಳ ಮೂಲಕ ಮಾಧ್ಯಮಗಳನ್ನು ಸೇರಿದಂತೆ ಸಾರ್ವಜನಿಕರನ್ನು ದಾರಿ ತಪ್ಪಿಸಿ, ಜನಸಮುದಾಯ ಸಹಕಾರಿ ವ್ಯವಸ್ಥೆಯನ್ನು ಅನುಮಾನದಿಂದ ನೋಡುವಂತೆ ಮಾಡುವ ಪ್ರಯತ್ನ ರಾಷ್ಟ್ರದ ದೃಷ್ಠಿಯಿಂದ, ಸಮಾಜದ ದೃಷ್ಠಿಯಿಂದ ಒಳ್ಳೆಯದಲ್ಲ.

    ಸಹಕಾರ ಚಳವಳಿ ವಿಶ್ವಮಾನ್ಯತೆ ಗಳಿಸಿದೆ. ಭಾರತದಲ್ಲಿ ಬೃಹತ್ ಸಹಕಾರಿ ವ್ಯವಸ್ಥೆಯ ಜಾಲವಿದೆ. 8 ಲಕ್ಷ ಸಹಕಾರ ಸಂಸ್ಥೆಗಳು 30 ಕೋಟಿ ಸದಸ್ಯರು ಇದ್ದು ರಾಷ್ಟ್ರದ ಅರ್ಥ ವ್ಯವಸ್ಥೆಗೆ ಪೋಷಕವಾಗಿದೆ.ಕರ್ನಾಟಕದಲ್ಲಿ 45 ಸಾವಿರ ಸಹಕಾರ ಸಂಘಗಳಿದ್ದು, 2 ಕೋಟಿ 45 ಲಕ್ಷ ಸದಸ್ಯರಿದ್ದಾರೆ. “ಆಡು ಮುಟ್ಟದ ಸೊಪ್ಪಿಲ್ಲ’’ ಎನ್ನುವಂತೆ ಸಹಕಾರಿ ವ್ಯವಸ್ಥೆ ಜೀವನದ ಎಲ್ಲ ಪ್ರಾಕಾರಗಳನ್ನು ಆವರಿಸಿಕೊಂಡಿದೆ. ಬಡತನ ನಿವಾರಣೆ, ಉದ್ಯೋಗಸೃಷ್ಠಿಗೆ ಆದ್ಯತೆ ನೀಡಿದೆ.

    ಯಾವುದೇ ಚಳವಳಿ, ಯಾವುದೇ ವ್ಯವಸ್ಥೆ ಬೃಹತ್ ಪ್ರಮಾಣದಲ್ಲಿ ಬೆಳೆಯಲಾರಂಭಿಸಿದಾಗ ಸಣ್ಣಪುಟ್ಟ ಲೋಪಗಳು ಸಹಜವಾಗಿ ಕಂಡುಬರುತ್ತವೆ. ಅವು ಮಾರಕವಾಗುವಷ್ಟು ಬಲಿಷ್ಠವಾಗೇನೂ ಇರುವುದಿಲ್ಲ. ಇಂತಹ ಪರಿಸ್ಥಿತಿಯನ್ನೇ ಸಹಕಾರ ವ್ಯವಸ್ಥೆ ಎದುರಿಸುತ್ತಿದೆ. ಸಹಕಾರ ಚಳವಳಿ ಪ್ರಜಾಸತ್ತಾತ್ಮಕ ವಿಧಿವಿಧಾನಗಳ ಅಡಿ ಕೆಲಸ ಮಾಡುವುದರಿಂದ ಮಾನವ ಸಹಜ ದೌರ್ಬಲ್ಯ ಇಣಿಕಿ ಹಾಕುವ ಸಂಭವವಿರುತ್ತದೆ. ಆ ಬಗ್ಗೆ ಕಳವಳಪಡಬೇಕಾದ ಅಗತ್ಯವಿಲ್ಲ.

    ವಿಶ್ವದ ಅರ್ಥತಜ್ಞರ ಮೆಚ್ಚುಗೆ

    ಅಮೇರಿಕಾ ಸೇರಿದಂತೆ ವಿಶ್ವದ ಅರ್ಥ ವ್ಯವಸ್ಥೆ ಕುಸಿದಾಗ, ಬ್ಯಾಂಕುಗಳು ದಿವಾಳಿ ಹಂತ ತಲುಪಿದಾಗ ಭಾರತದ ಸಹಕಾರಿ ಬ್ಯಾಂಕುಗಳು ಅಂಜದೆ, ಅಳುಕದೆ ದಿಟ್ಟತನದಿಂದ ಪ್ರಗತಿಯತ್ತ ಸಾಗಿದುದು ವಿಶ್ವದ ಅರ್ಥತಜ್ಞರ ಮೆಚ್ಚುಗೆಗೆ ಪಾತ್ರವಾಯಿತು.
    ಇಂದಿಗೂ ಭಾರತದಲ್ಲಿ ರೈತರ, ಗ್ರಾಮೀಣ ಜನರ ಬದುಕನ್ನು ಹಸನು ಮಾಡಲು ಸಹಕಾರಿ ವ್ಯವಸ್ಥೆಗೆ ಪರ್ಯಾಯ ವ್ಯವಸ್ಥೆ ಇಲ್ಲದಿರುವುದು ಕಣ್ಣಿಗೆ ಕಟ್ಟಿದಂತಿದೆ.

    ಭಾರತದಲ್ಲಿ 1500ಕ್ಕೂ ಹೆಚ್ಚು, ಕರ್ನಾಟಕದಲ್ಲಿ 260ಕ್ಕೂ ಹೆಚ್ಚು ಪಟ್ಟಣ ಸಹಕಾರಿ ಬ್ಯಾಂಕುಗಳಿವೆ. ಲಕ್ಷಾಂತರ ಕೋಟಿ ರೂ. ಠೇವಣಿಗಳಿವೆ, ಲಕ್ಷಾಂತರ ಕೋಟಿ ರೂ. ಸಾಲ ವಿತರಣೆಯಾಗುತ್ತಿದೆ. ಅಂತ ಸಂದರ್ಭದಲ್ಲಿ ಅಲ್ಲೊಂದು, ಇಲ್ಲೊಂದು ಬ್ಯಾಂಕಿನಲ್ಲಿ ಆಗಬಹುದಾದ ಲೋಪವನ್ನು ಸಾರ್ವತ್ರೀಕರಣಗೊಳಿಸಲಾಗದು. ಸಹಕಾರಿ ಬ್ಯಾಂಕುಗಳು ರಿಜರ್ವ್ ಬ್ಯಾಂಕ್ ಮತ್ತು ರಾಷ್ಟ್ರದ ಎಲ್ಲ ಕಾನೂನು, ನಿಯಮಗಳ ಅಡಿ ಕೆಲಸ ಮಾಡುತ್ತಿವೆ. ಸ್ವೇಚ್ಛೆಯಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ತಪ್ಪು ಮಾಡಿದ ಸಂಘಗಳು ಹಾಗೂ ವ್ಯಕ್ತಿಗಳು ಶಿಕ್ಷೆಗೆ ಒಳಗಾಗಿದ್ದು, ವ್ಯವಸ್ಥೆ ಪಾರದರ್ಶಕವಾಗಿದೆ. ಹಾಗೆಯೇ ಕೃಷಿ, ಹೈನುಗಾರಿಕೆ, ಸಹಕಾರ ಸಂಘಗಳೂ ಸಹ ಜನಪರ ಧೋರಣೆಯೊಂದಿಗೆ ಕೆಲಸ ಮಾಡುತ್ತಿವೆ. ದೊಡ್ಡ ಪ್ರಮಾಣದ ಪ್ರಯತ್ನದಲ್ಲಿ ಸಣ್ಣ ಪ್ರಮಾಣದ ಲೋಪವನ್ನು ದೊಡ್ಡದು ಮಾಡಿ ಅಪಪ್ರಚಾರಕ್ಕೆ ಅವಕಾಶ ಕೊಡುವುದು ಬೇಡ.

    ಮಾಧ್ಯಮಗಳು ಜನರ ಭಾವನೆಗಳ ಮೇಲೆ, ನಂಬಿಕೆಗಳ ಮೇಲೆ ಅಪಾರ ಪರಿಣಾಮ ಬೀರುತ್ತವೆ. ಮಾಧ್ಯಮಗಳ ಮೂಲಕ ಪಟ್ಟಭದ್ರರು ಸಹಕಾರ ಕ್ಷೇತ್ರದ ಮೇಲೆ ಅಪಪ್ರಚಾರ ನಡೆಸಿದಾಗ ಜನತೆ ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಕಳೆದುಕೊಳ್ಳುತ್ತಾರೆ. ಇದು ರಾಷ್ಟ್ರದ ಹಿತದೃಷ್ಠಿಯಿಂದ ಒಳ್ಳೆಯದಲ್ಲ. ಅದು ಕಳವಳಕ್ಕೆ ಕಾರಣವಾಗಿದೆ. ಕರ್ನಾಟಕದ ಜನತೆ ಪ್ರಬುದ್ಧರಾಗಿದ್ದಾರೆ. ಸಹಕಾರ ತತ್ವದಲ್ಲಿ, ವ್ಯವಸ್ಥೆಯಲ್ಲಿ ನಂಬಿಕೆ, ವಿಶ್ವಾಸವನ್ನು ಇರಿಸಿಕೊಂಡವರಿದ್ದಾರೆ.

    ಆತಂಕದ ಅಗತ್ಯವಿಲ್ಲ

    ಕರ್ನಾಟಕದಲ್ಲಿ ಕಾರ್ಯನಿರತವಾಗಿರುವ 36532 ಸಹಕಾರ ಸಂಘಗಳಲ್ಲಿ 2460ಸಂಘಗಳು ನಿಷ್ಕ್ರಿಯವಾಗಿವೆ ಎಂದರೆ ಅದು ಹಲವು ದಶಕಗಳ ಕಾಲದ ಕೂಡಿಬಂದಿರುವ ಪ್ರಕ್ರಿಯೆ ಹಾಗೂ 50 ವಿಭಾಗಗಳಲ್ಲಿ ಕ್ರೋಢೀಕೃತವಾದ ಸಂಖ್ಯೆಯಾಗಿದೆ. ಇದು ಗಾಬರಿಯಾಗುವಂತಹುದಲ್ಲ. ಒಂದೆರಡು ಬ್ಯಾಂಕುಗಳು ಮಾಡಿರಬಹುದಾದ ತಪ್ಪುಗಳ ತನಿಖೆ ನಡೆಯುತ್ತಿದ್ದು, ಯಾವ ಠೇವಣಿದಾರರೂ ಆತಂಕಪಡಬೇಕಾದ ಅಗತ್ಯವಿಲ್ಲವೆಂಬ ಭರವಸೆ ಇದೆ.

    ನಮ್ಮ ರಾಜ್ಯದ ಸಹಕಾರ ಸಂಘಗಳಲ್ಲಿನ ಠೇವಣಿ ಮೊತ್ತ, ಲಾಭ ಗಳಿಸುತ್ತಿರುವ ಸಂಘಗಳ ಸಂಖ್ಯೆ, ಸದಸ್ಯರ ಸಂಖ್ಯೆಗಳು ವ್ಯವಸ್ಥೆಯ ಭದ್ರತೆಗೆ ಸಾಕ್ಷಿ ಎನಿಸಿವೆ. ಸಹಕಾರ ಸಂಘಗಳಲ್ಲಿನ ಲೋಪಕ್ಕೆ ತಕ್ಕ ಶಿಕ್ಷೆ ನೀಡುವ ಬಗ್ಗೆ ಸಹಕಾರಿ ಕಾನೂನು ತಿದ್ದುಪಡಿಗೆ ಪ್ರಯತ್ನಗಳು ನಡೆದಿವೆ.ಸಹಕಾರ ಸಂಘಗಳು ತಮ್ಮ ನೋಂದಣಿಯನ್ನು ಪ್ರತಿ ವರ್ಷ ನವೀಕರಿಸಿಕೊಳ್ಳಬೇಕಾದ ಅಗತ್ಯ ಇರುವುದಿಲ್ಲ.ಹೀಗಾಗಿ ನಮ್ಮ ರಾಜ್ಯದ ಸಹಕಾರ ಸಂಘಗಳು, ಸಹಕಾರಿ ವ್ಯವಸ್ಥೆ ಕೆಲವೇ ಕೆಲವು ದೌರ್ಬಲ್ಯಗಳ ನಡುವೆಯೂ ಸಶಕ್ತವಾಗಿದ್ದು ಯಾರೂ ಯಾವುದೇ ಸಂದರ್ಭದಲ್ಲೂ ಕಳವಳಕ್ಕೆ ಒಳಗಾಗಬೇಕಾದ ಅಗತ್ಯವಿಲ್ಲವೆಂದು ತಿಳಿಸುತ್ತಿದ್ದೇನೆ ಎಂದು ಜಿ ಟಿ ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

    E-Office mandatory in Universities -ವಿ.ವಿ.ಗಳಲ್ಲಿ ಇ-ಆಫೀಸ್ ಕಡ್ಡಾಯ; ಭೌತಿಕ ರೂಪದಲ್ಲಿ ಪತ್ರ, ಕಡತ, ಪ್ರಸ್ತಾವನೆ ಬಂದರೆ ವಾಪಸ್

    BENGALURU FEB 25

    ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಈ ಬಗ್ಗೆ ತಮ್ಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, `ಇ-ಆಫೀಸ್’ ತಂತ್ರಾಂಶದ ಮೂಲಕವೇ ಕಡತಗಳನ್ನು ಕಳುಹಿಸಲು ವಿ.ವಿ.ಗಳಿಗೆ ಈ ಹಿಂದೆಯೇ ಸೂಚಿಸಿತ್ತು. ಆದರೂ ಕೆಲ ವಿ.ವಿ.ಗಳಲ್ಲಿ ಈ ಕೆಲಸ ಆಗಿಲ್ಲದಿರುವುದು ತಮ್ಮ ಗಮನಕ್ಕೆ ಬಂದಿದೆ’ ಎಂದು ಎಚ್ಚರಿಸಿದ್ದಾರೆ.

    ತಮ್ಮ ಕಚೇರಿಯು ಈಗಾಗಲೇ ಸಂಪೂರ್ಣವಾಗಿ ಇ-ಆಫೀಸ್ ತಂತ್ರಾಂಶದ ಮೇಲೆಯೇ ಕೆಲಸ ಮಾಡುತ್ತಿದೆ. ಆದರೆ ಇಲಾಖೆಗೆ ವಿ.ವಿ.ಗಳಿಂದ ಎಲ್ಲ ಪತ್ರಗಳು, ಕಡತಗಳು ಮತ್ತು ಪ್ರಸ್ತಾವನೆಗಳು ಭೌತಿಕ ರೂಪದಲ್ಲಿ ಬರುತ್ತಿವೆ. ಇದರಿಂದಾಗಿ ಇ-ಆಫೀಸ್ ತಂತ್ರಾಂಶ ಅಳವಡಿಕೆಯ ಮೂಲೋದ್ದೇಶವೇ ವಿಫಲವಾದಂತಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ವಿ.ವಿ.ಗಳ ಆಡಳಿತವೂ ಸೇರಿದಂತೆ ಪ್ರತಿಯೊಂದು ಕೆಲಸವೂ ತ್ವರಿತವಾಗಿ ಮತ್ತು ಪಾರದರ್ಶಕವಾಗಿ ನಡೆಯುವಂತೆ ಮಾಡಬೇಕೆನ್ನುವುದು ಇ-ಆಫೀಸ್ ತಂತ್ರಾಂಶದ ಗುರಿಯಾಗಿದೆ. ವಿ.ವಿ.ಗಳು ಸಮಕಾಲೀನ ಶೈಲಿಯನ್ನು ಅಳವಡಿಸಿಕೊಳ್ಳದಿದ್ದರೆ ಅಪ್ರಸ್ತುತವಾಗಲಿವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

    ಜೊತೆಗೆ, ಎನ್ಇಪಿ ಅನುಸಾರ ವಿ.ವಿ.ಗಳಲ್ಲಿ ನಡೆಯುತ್ತಿರುವ ಡಿಜಿಟಲೀಕರಣ, ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಅಳವಡಿಕೆ, ರಾಷ್ಟ್ರೀಯ ಶೈಕ್ಷಣಿಕ ಕೋಶ (ಎನ್ಎಡಿ), ಇ-ಆಫೀಸ್ ಬಳಕೆಗೆ ವಿ.ವಿ.ಗಳಲ್ಲಿನ ಸಿಬ್ಬಂದಿಯನ್ನು ಹೇಗೆ ಸಿದ್ಧಗೊಳಿಸಲಾಗಿದೆ ಎನ್ನುವುದನ್ನು ಪರಿಶೀಲಿಸಲು ಒಂದು ಸಮಿತಿಯನ್ನು ರಚಿಸಿ, 15 ದಿನಗಳಲ್ಲಿ ತಮಗೆ ವರದಿ ನೀಡುವಂತೆಯೂ ಅವರು ಸೂಚಿಸಿದ್ದಾರೆ.

    Hampi: ಹಂಪಿಯಲ್ಲಿ ದೇವಾಲಯ ವಾಸ್ತುಶಿಲ್ಪ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ

    HAMPI FEB 24
    ರಾಷ್ಟ್ರವ್ಯಾಪಿ ನಡೆಯುತ್ತಿರುವ ಆಜಾದಿ ಕಾ ಅಮೃತ ಮಹೋತ್ಸವದ ಭಾಗವಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್ ಐ) ಹಂಪಿ (ಕರ್ನಾಟಕ)ಯಲ್ಲಿ 2022ರ ಫೆಬ್ರವರಿ25-26ರಂದು ಎರಡು ದಿನಗಳ “ದೇವಯಾತನಂ-ಭಾರತೀಯ ದೇವಾಲಯ ವಾಸ್ತುಶಿಲ್ಪ ಅದ್ಭುತ ಮಹಾಕಾವ್ಯ” ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.

    ಕೇಂದ್ರ ಸಂಸ್ಕೃತಿ ಸಚಿವರಾದ ಜಿ. ಕಿಶನ್ ರೆಡ್ಡಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸಂಸ್ಕೃತಿ ಖಾತೆ ರಾಜ್ಯ ಸಚಿವ ಗೌರವಾನ್ವಿತ ಶ್ರೀ ಅರ್ಜುನ್ ರಾಮ್ ಮೇಘವಾಲ್ ಅವರು ವರ್ಚುವಲ್ ಮುಲಕ ಕಾರ್ಯಕ್ರಮದಲ್ಲಿ ಭಾಗವಹಿಸುವರು.

    ಉದ್ಘಾಟನಾ ಸಮಾರಂಭವು ಹಂಪಿ ಪಟ್ಟಾಭಿರಾಮ ದೇವಸ್ಥಾನದಲ್ಲಿ ನಡೆಯಲಿದ್ದು, ಶೈಕ್ಷಣಿಕ ಅಧಿವೇಶನಗಳನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಮ್ಮೇಳನಕ್ಕೆ ಆಯ್ಕೆಮಾಡಿರುವ ಸ್ಥಳ ಹಂಪಿ, 1336 ರಿಂದ 1556 ವರೆಗೆ ಎರಡು ಶತಮಾನಕ್ಕೂ ಅಧಿಕ ಕಾಲ ವಿಜಯನಗರದ ಮಹಾ ಮಧ್ಯಕಾಲೀನ ಯುಗದ ಸಾಮ್ರಾಜ್ಯದ ರಾಜಧಾನಿಯಾಗಿ ವೈಭವ ಮೆರೆದಿತ್ತು.

    ದೇವಾಲಯವು ತನ್ನದೇ ಆದ ರೀತಿಯಲ್ಲಿ ಭಾರತೀಯ ಜೀವನದ ಅವಿಭಾಜ್ಯ ಅಂಗವಾಗಿದೆ. ದೇವಾಲಯದ ನಿರ್ಮಾಣವು ಉಪಖಂಡದಲ್ಲಿ ಮಾತ್ರವಲ್ಲದೆ ಆಗ್ನೇಯ ಮತ್ತು ಪೂರ್ವ ಏಷ್ಯಾದಂತಹ ಹತ್ತಿರದ ನೆರೆಹೊರೆ ರಾಷ್ಟ್ರಗಳಿಗೂ ಹರಡಿದೆ. ಆದ್ದರಿಂದ, ದೇವಾಲಯದ ವಾಸ್ತುಶಿಲ್ಪದ ಕಲೆ ಮತ್ತು ತಂತ್ರವು ಹೇಗೆ ಹರಡಿತು ಎಂಬುದು ಆಸಕ್ತಿಕರ ಅಧ್ಯಯನವಾಗಿದೆ. ಭಾರತವು ಇತರ ಪ್ರದೇಶಗಳಿಗೆ ಮತ್ತು ಸ್ಥಳೀಯ ಅಗತ್ಯಗಳಿಗೆ ಸರಿಹೊಂದುವಂತೆ ಈ ಕಲೆಯನ್ನು ಹೇಗೆ ಮಾರ್ಪಡಿಸಲಾಗಿದೆ ಮತ್ತು ಅದು ಹೇಗೆ ಹೊಸ ವಾಸ್ತುಶಿಲ್ಪದ ಶೈಲಿಗಳ ಅಭಿವೃದ್ಧಿಗೆ ಸ್ಫೂರ್ತಿ ನೀಡುತ್ತದೆ ಎಂಬುದು ಮುಖ್ಯವಾಗಿದೆ.

    ಸಮ್ಮೇಳನವು ದೇವಾಲಯಗಳ ತಾತ್ವಿಕ, ಧಾರ್ಮಿಕ, ಸಾಮಾಜಿಕ, ಆರ್ಥಿಕ, ತಾಂತ್ರಿಕ, ವೈಜ್ಞಾನಿಕ, ಕಲೆ ಮತ್ತು ವಾಸ್ತುಶಿಲ್ಪದ ಅಂಶಗಳನ್ನು ಚರ್ಚಿಸುವ ಉದ್ದೇಶ ಹೊಂದಿದೆ. ಅಲ್ಲದೆ, ನಾಗರ, ವೇಸರ, ದ್ರಾವಿಡ, ಕಳಿಂಗಾ ಮತ್ತು ಇತರ ದೇವಾಲಯಗಳ ವಾಸ್ತುಶಿಲ್ಪದ ನಾನಾ ಶೈಲಿಗಳ ಉದಯ ಮತ್ತು ಅಭಿವೃದ್ಧಿಯ ಕುರಿತು ಸಂವಾದ ಆಯೋಜಿಸಲಾಗಿದೆ.

    ಭಾರತದ ದೇವಾಲ‌ಯದ ವಾಸ್ತುಶಿಲ್ಪದ ನಾನಾ ಆಯಾಮಗಳು ಅಂದರೆ ದೇವಾಲಯ- ರೂಪವಿಲ್ಲದಿರುವುದಕ್ಕೆ ರೂಪ‌ ನೀಡುವುದು, ದೇವಾಲಯ-ದೇಗುಲ ವಾಸ್ತುಶಿಲ್ಪದ ಉದಯ, ದೇವಾಲಯ- ಪ್ರಾದೇಶಿಕ ಸ್ವರೂಪ ಮತ್ತು ವಿನ್ಯಾಸದ ಅಭಿವೃದ್ಧಿ, ದೇವಾಲಯ- ಕಲೆ, ಸಂಸ್ಕೃತಿ, ಶಿಕ್ಷಣ, ಆಡಳಿತ ಮತ್ತು ಆರ್ಥಿಕತೆಯ ಕೇಂದ್ರ ಬಿಂದು, ದೇವಾಲಯ- ಪರಿಸರ ಸಂರಕ್ಷಣೆ, ದೇವಾಲಯ-ಆಗ್ನೇಯ ಏಷ್ಯಾದಲ್ಲಿ ಸಂಸ್ಕೃತಿ ಪ್ರಸರಣ ಸೇರಿದಂತೆ ನಾನಾ ವಿಷಯಗಳ ಗೋಷ್ಠಿಗಳು ನಡೆಯಲಿವೆ.

    ಈ ಸಮ್ಮೇಳನ ಭಾರತೀಯ ಇತಿಹಾಸದ , ವಿದ್ವಾಂಸರು ಹಾಗೂ ವಿದ್ಯಾರ್ಥಿಗಳು, ಪುರಾತತ್ವ, ಸಂಸ್ಕೃತಿ ಮತ್ತು ವಾಸ್ತುಶಿಲ್ಪ ಮತ್ತು ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ. ನಮ್ಮ‌ಪರಂಪರೆಯ ಬಗ್ಗೆ ತಿಳಿಯಲು ಮತ್ತು ಕಲಿಕೆ ಸೇರಿದಂತೆ ವಿದ್ಯಾರ್ಥಿಗಳು ಮತ್ತು ವಿದ್ವಾಂಸರಿಗೆ ಆಸಕ್ತಿ ಬೆಳೆಸುವ ಗುರಿಯನ್ನು ಸಮ್ಮೇಳನ ಹೊಂದಿದೆ.

    ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯು ಭಾರತದ ಸಾಮಾಜಿಕ-ಸಾಂಸ್ಕೃತಿಕ, ರಾಜಕೀಯ ಮತ್ತು ಆರ್ಥಿಕ ಗುರುತು ಮತ್ತು ಸ್ವಾತಂತ್ರ್ಯದ ನಂತರದ ಪ್ರಗತಿಯನ್ನು ಗುರುತಿಸುವುದಾಗಿದೆ.

    Blood Dontation Camp: ಮಂಗಳೂರು ವಿಶ್ವವಿದ್ಯಾನಿಲಯದಿಂದ ರಕ್ತದಾನ ಶಿಬಿರ

    MANGALURU FEB 24

    ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್, ಮತ್ತು  ʼಮಂಗಳ ಯೋಜನೆʼ ಗ್ರಾಮ ದತ್ತು ಸ್ವೀಕಾರ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ – 7ನೇ ಬೆಟಾಲಿಯನ್  (ಅಸೈಗೋಳಿ) ಜಂಟಿ ಸಹಭಾಗಿತ್ವದಲ್ಲಿ ಮಂಗಳಗಂಗೋತ್ರಿಯ   ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ  ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

    ಒಡಿಯೂರು ಶ್ರೀ ದತ್ತಾಂಜನೇಯ ಕ್ಷೇತ್ರದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಗುರುದೇವಾನಂದ ಸ್ವಾಮೀಜಿ ಶಿಬಿರವನ್ನು ಉದ್ಘಾಟಿಸಿ,  “ಹೃದಯದಲ್ಲಿ ಪ್ರೀತಿ ಭಾವಗಳು ತುಂಬಿಕೊಂಡಾಗ ದ್ವೇಷಗಳು ದೂರವಾಗಿ ಮಾನವೀಯ ಮೌಲ್ಯಗಳು  ಬೆಳೆಯುವಲ್ಲಿ ಸಹಕಾರಿಯಾಗುತ್ತದೆ. ರಕ್ತಕ್ಕೆ ಜಾತಿ ಮತ ಬೇಧವಿಲ್ಲ. ರಕ್ತದಾನ ಬಹಳ ಶ್ರೇಷ್ಠವಾದುದು. ಅದರಲ್ಲೂ  ದಾನದ ಹಿಂದಿರುವ ಪ್ರೀತಿ ಬಹಳ  ಪ್ರಮುಖವಾದುದು. ವಿಶ್ವವಿದ್ಯಾನಿಲಯ ಹಾಗೂ  ಸಂಘ ಸಂಸ್ಥೆಗಳು ಸೇರಿಕೊಂಡು ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು  ಆಯೋಜನೆ‌ ಮಾಡಿರುವುದು ಶ್ಲಾಘನೀಯ.    ಮಂಗಳೂರು ವಿಶ್ವವಿದ್ಯಾನಿಲಯವು ಶಿಕ್ಷಣದ ಜೊತಗೆ ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿವುದು ಉತ್ತಮವಾದ ಬೆಳವಣಿಗೆಯಾಗಿದೆ ಎಂದು ಹೇಳಿದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ‘ರಕ್ತದಾನದಂತಹ ಮಹಾನ್ ಕಾರ್ಯ ಬೇರೊಂದಿಲ್ಲ. ಇದು ಜಾತಿ‌ಮತ ಧರ್ಮವನ್ನು ಮೀರಿ ನಿಂತಿದೆ.  ರಕ್ತ ಸಿಗದೇ ಯಾರೂ ಮರಣಿಸಬಾರದು. ಹಾಗೆಯೇ ರಕ್ತದಾನ ಮಾಡದೇ ಯಾರೂ ಇಹ ತ್ಯಜಿಸಬಾರದು. ರಕ್ತದಾನದ ಬಗ್ಗೆ ಸಮಾಜದಲ್ಲಿರುವ ಅಪನಂಬಿಕೆಯನ್ನು ದೂರಗೊಳಿಸಬೇಕಿದೆ ಎಂದರು.ಶಸ್ತ್ರಚಿಕಿತ್ಸೆ, ಅಪಘಾತ, ಆಘಾತ, ಕೆಲವು ಅನುವಂಶಿಕ ಕಾಯಿಲೆಗಳು, ಕ್ಯಾನ್ಸರ್ ಹೀಗೆ ಹಲವಾರು ಸಂಧರ್ಭಗಳಲ್ಲಿ ರಕ್ತವು ತುರ್ತಾಗಿ ಬೇಕಿದ್ದು, ರೋಗಿಗಳನ್ನು ಉಳಿಸಲು ದಾನಿಗಳು ನೀಡುವ ರಕ್ತವು ಅಮೂಲ್ಯವಾದದ್ದು. ಎಷ್ಟೋ ಸಂದರ್ಭಗಳಲ್ಲಿ ರಕ್ತವು ಸಮಯಕ್ಕೆ ಸರಿಯಾಗಿ ಸಿಗದೇ ಆಸ್ಪತ್ರೆಯಲ್ಲಿ ರೋಗಿಗಳು ಮರಣ ಹೊಂದುವ ಸ್ಥಿತಿ ನಿರ್ಮಾಣವಾಗುತ್ತದೆ. ಆದುದರಿಂದ ರಕ್ತದಾನ ಶಿಬಿರಗಳಲ್ಲಿ ಅಥವಾ ರಕ್ತ ನಿಧಿಯಲ್ಲಿ ನಿಯಮಿತವಾಗಿ ರಕ್ತವನ್ನು ದಾನ ಮಾಡುವುದರಿಂದ ಎಷ್ಟೋ ಜನರ ಪ್ರಾಣವನ್ನು ಉಳಿಸಬಹುದು. ನಮ್ಮ ದೇಶದಲ್ಲಿ ಅನೇಕ ಜನರು ಮುಖ್ಯವಾಗಿ ಯುವಜನತೆಯು ರಕ್ತದಾನ ಮಹಾಕಾರ್ಯದಲ್ಲಿ ಭಾಗಿಯಾಗಿ ರಕ್ತವನ್ನು ನೀಡುವುದು ಪ್ರಶಂಶನೀಯ ಎಂದರು.

    ಆದಾಗ್ಯೂ ಕೂಡ ಇನ್ನು ಎಷ್ಟೋ ಆರೋಗ್ಯವಂತ ಜನರು ರಕ್ತದಾನದಲ್ಲಿ ಭಾಗಿಯಾಗಲು ಭಯ ಅಥವಾ ತಪ್ಪು ನಂಬಿಕೆಗಳಿಂದ ಹಿಂಜರಿಯುತ್ತಾರೆ. ಇದಕ್ಕೆ ಮುಖ್ಯ ಕಾರಣ ರಕ್ತದಾನದ ಬಗ್ಗೆ ಪರಿಪೂರ್ಣ ಜ್ಞಾನದ ಕೊರತೆ ಇರುವುದು. ರಕ್ತ ಮತ್ತು ರಕ್ತದಾನದ ಮಹತ್ವದ ಬಗ್ಗೆ ಸಾಮಾನ್ಯ ಜನರಲ್ಲಿ ಜ್ಞಾನವನ್ನು ಪಸರಿಸಿವುದು ಮತ್ತು
    ಆ ಮೂಲಕ ಜನಜಾಗೃತಿಯನ್ನು ಉಂಟುಮಾಡಿ ಅವರಲ್ಲಿ ರಕ್ತದಾನಕ್ಕೆ ಹುರಿದುಂಬಿಸುವುದೂ ಕೂಡ ಮುಖ್ಯವಾದದ್ದು. ಈ ಹಿನ್ನೆಲೆಯಲ್ಲಿ, ಈಗಾಗಲೇ ರಕ್ತದಾನ ಶಿಬಿರವನ್ನು ಆಯೋಜಿಸಿ ಅನುಭವ ಇರುವ ; ‘ರಕ್ತದಾನ ಮಹಾದಾನ – ವೈಜ್ಜಾನಿಕ ಮಾಹಿತಿ’  ಎಂಬ ಕೈಪಿಡಿಯನ್ನು ಹೊರತರುತ್ತಿರುವುದು ಒಂದು ಶ್ಲಾಘನೀಯ ಕೆಲಸ ಎಂದರು.

    ಈ ಕೈಪಿಡಿಯಲ್ಲಿ ರಕ್ತದಾನ ನಡೆದು ಬಂದು ಕಿರು ಇತಿಹಾಸ, ರಕ್ತ ದಾನಿಗಳಿಗೆ ಇರಬೇಕಾದ ಅರ್ಹತೆಗಳು, ಯಾರೆಲ್ಲ ಮತ್ತು ಯಾವ ಸಂದರ್ಭದಲ್ಲಿ ರಕ್ತದಾನ ಮಾಡಲಾಗದು , ರಕ್ತದ ಕಾರ್ಯಚಟುವಟಿಕೆಗಳು, ರಕ್ತದ ಘಟಕಗಳು, ಅವುಗಳ ಸಂಗ್ರಹ ವಿಧಾನ ಮತ್ತು ಶೇಖರಣೆ, ರಕ್ತದಾನದ ಬಗ್ಗೆ ಇರುವ ತಪ್ಪು ನಂಬಿಕೆಗಳು, ರಕ್ತದಾನದಿಂದ ದಾನಿಗಳಿಗೆ ಆಗುವ ಪ್ರಯೋಜನಗಳು, ರಕ್ತದಾನದ ಮೊದಲು, ರಕ್ತದಾನದ ದಿನ ಮತ್ತು ರಕ್ತದಾನದ ನಂತರ ದಾನಿಗಳು ವಹಿಸಬೇಕಾದ ಎಚ್ಚರ, ಮುಂತಾದವುಗಳ ಬಗ್ಗೆ ವಿವಿಧ ಸಂಪನ್ಮೂಲಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಸರಳವಾಗಿ ನೀಡಿದ್ದಾರೆ. ಈ ಕೈಪಿಡಿಯು ಉಚಿತವಾಗಿ ಹಂಚುತ್ತಿದ್ದು ಇದರಲ್ಲಿರುವ ಮಾಹಿತಿಯು ಜನರಲ್ಲಿ ರಕ್ತದಾನದ ಬಗ್ಗೆ ಜ್ಞಾನದ ಜೊತೆಗೆ ಇನ್ನಷ್ಟೂ ಪ್ರೇರಣೆ ನೀಡುತ್ತದೆ ಎಂದು ಆಶಿಸುತ್ತೇನೆ. ಬನ್ನಿ ರಕ್ತದಾನ ಮಾಡಿ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯೋಣ’  ಎಂದು ಹೇಳಿದರು.

     ಈಗಾಗಲೇ ಮಂಗಳೂರು ವಿಶ್ವವಿದ್ಯಾನಿಲಯವು ಹತ್ತು ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದು ಗಡಿನಾಡಿನ ಶಾಲೆ ಸೇರಿದಂತೆ ಇನ್ನೂ ಐದು ಶಾಲೆ ದತ್ತು ತೆಗೆದುಕೊಳ್ಳುವ ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದರು.

     ಇದೇ ವೇಳೆ  ಮಂಗಳೂರು ವಿವಿಯ ಕುಲಪತಿ  ಪ್ರೊ. ಪಿ.ಎಸ್ .ಯಡಪಡಿತ್ತಾಯ ಅವರು  ವಿಶ್ವವಿದ್ಯಾನಿಲಯದ ರಕ್ತದಾನಿಗಳ ವೆಬ್ ಪೋರ್ಟಲ್ ಬಿಡುಗಡೆ ಮಾಡಿದರು. ನಿವೃತ್ತ ಮುಖ್ಯೋಪಾಧ್ಯಾಯ ರವೀಂದ್ರ ರೈ ಕಲ್ಲಿಮಾರು ಅವರು ಪ್ರಶಾಂತ್ ನಾಯ್ಕ್ ಅವರ ಸಂಕಲನದ  ʼರಕ್ತದಾನ ಮಹಾದಾನ- ವೈಜ್ಞಾನಿಕ ಮಾಹಿತಿʼ ಎಂಬ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು.

    ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ  7 ನೇ ಬೆಟಾಲಿಯನ್ನ ಕಮಾಂಡೆಂಟ್ ಬಿ ಎಂ ಪ್ರಸಾದ್, ಮಂಗಳೂರು ರೆಡ್ ಕ್ರಾಸ್ ಸೊಸೈಟಿಯ ಡಾ. ಜೆ ಎನ್ ಭಟ್,  ಅತಿಥಿಗಳಾಗಿ ಭಾಗವಹಿಸಿದ್ದರು.

    ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಗೋವಿಂದರಾಜು ಅವರು ಸ್ವಾಗತಿಸಿದರು. ಯುವ ರೆಡ್ ಕ್ರಾಸ್ ಸೊಸೈಟಿ, ಮಂಗಳಗಂಗೋತ್ರಿ ಘಟಕದ  ಕಾರ್ಯಕ್ರಮ ಅಧಿಕಾರಿ ಡಾ. ಪರಮೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿದರು.  ಮಂಗಳ ಯೋಜನೆ ಸಂಯೋಜಕರಾದ ಪ್ರೊ.ಪ್ರಶಾಂತ್ ನಾಯ್ಕ   ವಂದಿಸಿದರು. ಸಂಶೋಧನಾರ್ಥಿ ಚಂದನಾ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿವಿಯ ಯುವ ರೆಡ್ ಕ್ರಾಸ್ ಸೊಸೈಟಿಯ  ನೋಡಲ್ ಅಧಿಕಾರಿ ಡಾ. ಗಣಪತಿ ಗೌಡ ಮುಂತಾದವರು ಉಪಸ್ಥಿತರಿದ್ದರು.  
     ಶ್ರೀ ರಾಮಕೃಷ್ಣ ಪ್ರೌಢಶಾಲೆ ಹರೇಕಳದ ಸೌಜನ್ಯ ಸ್ಕೌಟ್ ಗೈಡ್ ದಳದ ವಿದ್ಯಾರ್ಥಿಗಳು ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿದರು.

    Russia attacks Ukraine:ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಆರಂಭ

    ಬೆಳ್ಳಂಬೆಳಗ್ಗೆ ಆದೇಶ ನೀಡಿದ ವ್ಲಾದಿಮೀರ್‌ ಪುಟಿನ್; ಅಮೆರಿಕ ಸೇರಿ ಜಾಗತಿಕ ಸಮುದಾಯ ಖಂಡನೆ, ಯುದ್ಧ ನಿಲ್ಲಿಸುವಂತೆ ಆಗ್ರಹ

    MOSCOW FEB 24

    ಜಾಗತಿಕ ಸಮುದಾಯ ಆತಂಕ ನಿಜವಾಗಿದ್ದು, ನಿರೀಕ್ಷೆಯಂತೆ ರಷ್ಯಾ ತನ್ನ ನೆರೆಯ ಉಕ್ರೇನ್‌ ಮೇಲೆ ಯುದ್ಧ ಆರಂಭಿಸಿದೆ. ಎರಡೂ ಕಡೆಯಿಂದಲೂ ಸಾವು ನೋವಿನ ವರದಿಗಳು ಬರುತ್ತಿವೆ. ಜಾಗತಿಕ ಮಟ್ಟದಲ್ಲಿ ಈ ಯುದ್ಧಕ್ಕೆ ವಿರೋಧ ವ್ಯಕ್ತವಾಗಿದೆ.

    ಭಾರತೀಯ ಕಾಲಮಾನದಂತೆ ಇಂದು ಬೆಳಗ್ಗೆ ಹೊತ್ತಿಗೆ ಮಾಸ್ಕೋದಲ್ಲಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ರಷ್ಯಾ ಅಧ್ಯಕ್ಷ ವ್ಲಾದಿಮೀರ್‌ ಪುಟಿನ್‌‌, ಉಕ್ರೇನ್‌ ಮೇಲೆ ರಷ್ಯಾ ದಾಳಿಗೆ ಆದೇಶ ನೀಡಿರುವುದಾಗಿ ಘೋಷಣೆ ಮಾಡಿದರು. ಬೆಳಗ್ಗೆ ಸುಮಾರು ಆರು ಗಂಟೆ ಹೊತ್ತಿಗೆ ರಷ್ಯಾ ಪಡೆಗಳು ದಾಳಿ ಶುರು ಮಾಡಿವೆ ಎಂದು ಗೊತ್ತಾಗಿದೆ.

    ರಷ್ಯಾ ನಡೆಸಿರುವ ಶೆಲ್‌ ದಾಳಿಯಲ್ಲಿ ಉಕ್ರೇನ್‌ʼನ ಕೆಲ ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ. ಕೆಲ ಜನರಿಗೆ ಗಾಯಗಳಾಗಿವೆ. ಸಾವು ನೋವಿನ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿಲ್ಲ. ಇದೇ ವೇಳೆ ರಷ್ಯಾಕ್ಕೆ ತಿರುಗೇಟು ನೀಡಲು ಉಕ್ರೇನ್‌ ಕೂಡ ಸಿದ್ಧತೆ ಮಾಡಿಕೊಂಡಿದೆ. ಕೆಲವು ರಷ್ಯಾ ಸೈನಿಕರನ್ನು ಸೆರೆ ಹಿಡಿದಿರುವುದಾಗಿ ಉಕ್ರೇನ್ ಹೇಳಿಕೊಂಡಿದೆ. 14 ಜನರಿದ್ದ ಉಕ್ರೇನ್ ವಿಮಾನವನ್ನು ಪತನಗೊಂಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

    ಶಸ್ತ್ರಾಸ್ತ್ರಗಳನ್ನು ಕೆಳಗಿಟ್ಟು ಶರಣಾಗುವಂತೆ ಉಕ್ರೇನ್‌ ಸೇನೆಗೆ ಕರೆ ನೀಡಿರುವ ಪುಟಿನ್‌, ರಷ್ಯಾ ಸಾರ್ವಭೌಮತೆ ರಕ್ಷಿಸಿಕೊಳ್ಳಲು ಹಾಗೂ ಯುರೋಪ್‌ ಖಂಡದಲ್ಲಿ ತನ್ನ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಎಲ್ಲ ರೀತಿ ಕ್ರಮಗಳನ್ನು ಕೈಗೊಳ್ಳಲು ಮುಕ್ತ ಅಧಿಕಾರ ಹೊಂದಿದೆ ಎಂದು ಪುಟಿನ್‌ ಹೇಳಿದ್ದಾರೆ.

    ಈ ವಿಷಯದಲ್ಲಿ ಯಾರೇ ಮೂರನೇ ಶಕ್ತಿ ಮಧ್ಯಪ್ರವೇಶ ಮಾಡಿದರೆ ಅವರಿಗೂ ತಕ್ಕ ಉತ್ತರ ನೀಡಲಾಗುವುದು ಎಂದು ಪುಟಿನ್‌ ಇದೇ ವೇಳೆ ಅಮೆರಿಕ ಹಾಗೂ ನ್ಯಾಟೋ ಪಡೆಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಎಚ್ಚರಿಕೆ ನೀಡಿದ್ದಾರೆ.

    ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿದರುವ ಅಮೆರಿಕ ಅಧ್ಯಕ್ಷ ಜೋ ಬೈಡನ್‌, ರಷ್ಯಾ ದಾಳಿಯನ್ನು ಕಠಿಣ ಶಬ್ದಗಳಲ್ಲಿ ಖಂಡಿಸಿದ್ದು, ಇದು ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ಅಪ್ರಚೋದಿತ ದಾಳಿ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಈ ದಾಳಿಗೆ ರಷ್ಯ ತಕ್ಕ ಬೆಲೆ ತೆರಲಿದೆ ಎಂದು ಬೈಡನ್‌ ಎಚ್ಚರಿಕೆ ನೀಡಿದ್ದಾರೆ. ಜತೆಯಲ್ಲಿ ಜರ್ಮನಿ, ಬ್ರಿಟನ್‌ ಸೇರಿದಂತೆ ಯುರೋಪ್‌,ನ ಬಹುತೇಕ ದೇಶಗಳು ದಾಳಿಯನ್ನು ಖಂಡಿಸಿವೆ.

    ಇದರ ಬೆನ್ನಲ್ಲೇ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ ಸೇರಿದ್ದು, ರಷ್ಯಾ ದಾಳಿಯನ್ನು ಖಂಡಿಸಿದೆ. ಆದರೆ, ಜಾಗತಿಕ ಸಮುದಾಯದ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿರುವ ಪುಟಿನ್‌, ರಷ್ಯದ ಹಿತವನ್ನು ಬಲಿಗೊಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

    ಭಾರತದ ಆತಂಕ :

    ಉಕ್ರೇನ್ ನಲ್ಲಿನ ಸ್ಥಿಗತಿಗಳ ಬಗ್ಗೆ ಭಾರತದ ಆತಂಕವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಬಗ್ಗೆ ಭಾರತ ಸರಕಾರ ಎಲ್ಲಾ ರೀತಿಯ ಪ್ರಯತ್ನ ಮಾ್ಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ಪ್ರಾಂತ್ಯದಲ್ಲಿ ಶಾಂತಿ ಮತ್ತು ಸುಭದ್ರತೆಯನ್ನು ಭಾರತ ಬಯಸುತ್ತದೆ ಎಂದು ಅವರು ಹೇಳಿದ್ದಾರೆ.

    ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    ಉಕ್ರೇನ್ ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

    ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಸುಮಾರು ಭಾರತದ ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದ್ದರಿಂದ ೧೦೦ ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿಕೊಂಡಿದ್ದಾರೆ. ಇವರಲ್ಲಿ ೧೦ ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೂ ನಿರಂತರ ಸಂಪರ್ಕದಲ್ಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

    ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತವಾಗಿರಲು ಭಾರತೀಯ ರಾಯಭಾರ ಕಚೇರಿ ಸೂಕ್ತ ಮಾರ್ಗದರ್ಶನವನ್ನು ನೀಡಿದೆ. ವಿಮಾನಗಳು ಪುನ: ಪ್ರಾರಂಭವಾದಾಗ ವಿದ್ಯಾರ್ಥಿಗಳನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕೇಂದ್ರ ವಿದೇಶಾಂಗ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

    ಉಕ್ರೇನ್‌ನಲ್ಲಿ ಯುದ್ಧದ ಛಾಯೆಯಿಂದಾಗಿ ಕಳೆದ ವಾರವೇ 200 ಭಾರತೀಯರು ಮರಳಿದ್ದರು. ಆಗ ವಿದ್ಯಾರ್ಥಿಗಳಿಗೆ ಮಾಹಿತಿ ಇರಲಿಲ್ಲವೇ ಎಂಬುದಕ್ಕೆ ಪ್ರತಿಕ್ರಯಿಸಿ, ವಿದ್ಯಾರ್ಥಿಗಳು ಬ್ಯಾಚ್‌ಗಳಲ್ಲಿ ಭಾರತಕ್ಕೆ ಮರಳುತ್ತಿದ್ದು, ಈ ಬ್ಯಾಚ್ ಕಡೆಯದಾಗಿತ್ತು. ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗುವುದು ಎಂದು ತಿಳಿಸಿದರು.

    ಟೆಂಪಲ್ ಟೂರಿಸಂಗೆ ಆದ್ಯತೆ ನೀಡಲು ಮುಖ್ಯಮಂತ್ರಿ ಕರೆ

    BENGALURU FEB 23
    ಕರ್ನಾಟಕದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶವಿರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸರ್ಕೂಟ್ ನಿರ್ಮಿಸುವಂತೆ ಮಖ್ಯಮಂತ್ರಿಗಳು ಸೂಚಿಸಿದರು.

    ಅವರು ಇಂದು ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು (Integrated Temple Management System- ಐಟಿಎಂಎಸ್) ಲೋಕಾರ್ಪಣೆ ಮಾಡಿ ಮಾತನಾಡುತ್ತಿದ್ದರು.ದೇವಸ್ಥಾನಗಳಲ್ಲಿ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

    ಐಟಿಎಂಎಸ್ ನ್ನು ಜಾರಿಗೆ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ದೇವಸ್ಥಾನಗಳ ನಿರ್ವಹಣೆ ಬಹಳ ಮುಖ್ಯ. ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಮುಂತಾದವುಗಳನ್ನು ದಾಖಲಿಸುವ ಪ್ರಯತ್ನವಾಗಬೇಕು. ದೇವಸ್ಥಾನಗಳ ಆಸ್ತಿಗಳ ನಿರ್ವಹಣೆಯನ್ನು ಅತ್ಯಂತ ಸಮರ್ಪಕವಾಗಿ ಮಾಡುವ ಅಗತ್ಯವಿದೆ ಎಂದರು.

    ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮಾಡಿ , ಪೂರ್ಣಪ್ರಮಾಣದಲ್ಲಿ ಸ್ಥಳೀಯವಾಗಿ ವ್ಯವಸ್ಥೆ ಮಾಡಿ ಆಡಳಿತ ಸುಧಾರಿಸುವ ಅಗತ್ಯವಿದೆ. ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವುದರಿಂದ ನಿರ್ವಹಣೆಯ ಜೊತೆಗೆ ನಿಯಂತ್ರಣವೂ ಅಗತ್ಯ ಎಂದರು. ದೇವಸ್ಥಾನಗಳ ಅರ್ಚಕರು ಹಾಗೂ ಪೂಜಾರಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

    ದೇವಸ್ಥಾನಗಳ ಸ್ವಚ್ಛತೆಗೆ ಆದ್ಯತೆ:ದೇವಸ್ಥಾನಗಳ ಸ್ವಚ್ಥತೆಯನ್ನು ಕಾಪಾಡಲು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳು ದೇವಸ್ಥಾನಗಳ ಆವರಣಗಳ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಎಸ್ ಎ ರಾಮದಾಸ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಮೊದಲಾದವರು ಉಪಸ್ಥಿತರಿದ್ದರು.

    ಮಂತ್ರಿಗಳ ಶಾಸಕರ ವೇತನ ಹೆಚ್ಚಳ; ಮಾರ್ಚ್ 4 ರಾಜ್ಯ ಬಜೆಟ್

    ಕಾಂಗ್ರೆಸ್ ವಿರೋಧ ಪಕ್ಷವಾಗಿ ವಿಫಲವಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

    BENGALURU FEB 22

    ಆಡಳಿತ ಪಕ್ಷವಾಗಿ ನೀವು ಕೆಲಸ ಮಾಡಲು ಯೋಗ್ಯರಲ್ಲ ಎಂದು ಜನ 2018 ರಲ್ಲಿ ತೀರ್ಮಾನ ಮಾಡಿದರು. ಕನಿಷ್ಠ ವಿರೋಧ ಪಕ್ಷವಾಗಿಯಾದರೂ ಕಾಂಗ್ರೆಸ್ ಪಕ್ಷ ಕೆಲಸ ಮಾಡಬೇಕಿತ್ತು. ವಿರೋಧ ಪಕ್ಷವಾಗಿಯೂ ಕಾಂಗ್ರೆಸ್ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

    ರಾಜಕಾರಣದ ಮುಸುಕು ಅವರ ಹಾಗೂ ಅವರ ಪಕ್ಷದ ಮೇಲೆ ಬಿದ್ದಿದೆ. ಎಲ್ಲವನ್ನೂ ರಾಜಕೀಯವಾಗಿ ನೋಡುವುದು, ಧ್ವೇಷದಿಂದ ನೋಡುವುದರಿಂದ ಅವರಿಗಾಗಲಿ, ಅವರ ಪಕ್ಷಕ್ಕಾಗಲಿ ರಾಜಕೀಯ ಭವಿಷ್ಯವಿಲ್ಲ. ಸದನ ಶುಕ್ರವಾರದ ವರೆಗೂ ನಡೆಯಬೇಕಿತ್ತು. ಸದನವನ್ನು ಇಂದೇ ಮೊಟಕುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದು ಬೇಸರದ ಸಂಗತಿ. ಪ್ರತಿಪಕ್ಷದವರು ಸದನ ಕರೆಯಿರಿ ಚರ್ಚಿಸಬೇಕು ಎನ್ನುತ್ತಾರೆ. ಅಧಿವೇಶನ ನಡೆಯುವಾಗ ಚರ್ಚೆ ಮಾಡಲು ಅವರು ತಯಾರಿಲ್ಲ. ಯಾವುದೇ ವಿಚಾರವನ್ನೇ ಆಗಲಿ ಚರ್ಚೆ ಹಾಗೂ ವಾದ ಮಾಡಬಹುದು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಸರ್ಕಾರದ ಸಾಧನೆಯನ್ನು ಹೇಳಿಕೊಂಡಾಗ ಅದರ ನ್ಯೂನ್ಯತೆ ಗಳನ್ನು ಹೇಳಬಹುದಾಗಿತ್ತು. ಆ ಕರ್ತವ್ಯವನ್ನೂ ಅವರು ಮಾಡಲಿಲ್ಲ.

    ಇಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯ ಬಗ್ಗೆಯೂ ಚರ್ಚೆ ಮಾಡಬಹುದಾಗಿತ್ತು. ಯಾವುದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಸರ್ಕಾರ ಸಿದ್ಧವಿತ್ತು. ಆದರೆ, ಆ ಹೇಳಿಕೆಯಲ್ಲಿ ಏನೂ ಇಲ್ಲ ಎಂದು ಅವರಿಗೆ ಗೊತ್ತಿದೆ ಎಂದು ಅವರು ಹೇಳಿದರು.

    ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ
    ಧರಣಿ ಮಾರ್ಗದ ಮುಖಾಂತರ ರಾಜ್ಯದ ಜನತೆ ಹಾಗೂ ಸದನದ ದಾರಿಯನ್ನು ತಪ್ಪಿಸಲು ನೋಡುತ್ತಿದ್ದಾರೆ. ವಸ್ತ್ರ ಸಂಹಿತೆಯ ಬಗ್ಗೆ ಉಚ್ಛ ನ್ಯಾಯಾಲಯದಲ್ಲಿ ಗಂಭೀರವಾದ ಚರ್ಚೆ ನಡೆಯುತ್ತಿದೆ. ಈಗಾಗಲೇ ಮಧ್ಯಂತರ ಆದೇಶ ನೀಡಿದೆ. ಅದರ ಅನುಷ್ಠಾನವಾಗುತ್ತಿದೆ. ಈ ಸಂದರ್ಭದಲ್ಲಿ ಕೆಲವು ಗೊಂದಲಗಳನ್ನು ಸೃಷ್ಟಿ ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ನಾವೆಲ್ಲರೂ ಒಕ್ಕೊರಲಿನ ಸಂದೇಶವನ್ನು ನೀಡೋಣ, ಅಂತಿಮ ಆದೇಶ ಬರುವವರೆಗೂ ಕಾದು, ಶಾಂತಿಯಿಂದ ಇರಬಹುದಾಗಿತ್ತು. ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ಪರೀಕ್ಷೆಗಳಿವೆ ಎಂಬ ಕನಿಷ್ಠ ಸಂದೇಶವನ್ನು ಕೊಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಮಾನವೀಯತೆ ವಿಚಾರವನ್ನೇ ಇಟ್ಟುಕೊಂಡಿಲ್ಲ. ರಾಜಕಾರಣವೇ ಪ್ರಮುಖವಾಗಿದೆ. ರಾಜಕಾರಣದಲ್ಲೂ ಕೂಡ ವಿರೋಧ ಪಕ್ಷದ ನಾಯಕರು, ಕಾಂಗ್ರೆಸ್ ಅಧ್ಯಕ್ಷರು, ಹಿರಿಯರು. ಬಹಳ ವರ್ಷಗಳಿಂದ ರಾಜಕಾರಣದಲ್ಲಿರುವವರು. ಅವರ ಅನುಭವ ಎಲ್ಲಿ ಹೋಯಿತು. ಅವರ ಅನುಭವದಿಂದ ವಿರೋಧ ಪಕ್ಷವಾಗಿ ಕೆಲಸ ಮಾಡಿದ್ದರೆ, ಜನ ಮೆಚ್ಚಿಕೊಳ್ಳುತ್ತಿದ್ದರು ಎಂದರು.

    ಮತಾಂತರ ನಿಷೇಧ ಕಾಯ್ದೆ:
    ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಮಂಡನೆಯಾಗಲಿಲ್ಲ. ಈಗ ಮಂಡಿಸಲು ಸಾಧ್ಯವಾಗಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಸದನ ವ್ಯವಸ್ಥಿತವಾಗಿಲ್ಲ. ಚರ್ಚೆ ಮಾಡಿ ಅಂಗೀಕರಿಸಲಾಗುವುದು ಎಂದರು.

    ಸಚಿವರು ಹಾಗೂ ಶಾಸಕರ ವೇತನ ಹೆಚ್ಚಳ:
    ರಾಜ್ಯದಲ್ಲಿ ಆರ್ಥಿಕ ಮುಗ್ಗಟ್ಟಿರುವ ಸಂದರ್ಭದಲ್ಲಿ ಸಚಿವರು ಮತ್ತು ಶಾಸಕ ವೇತನವನ್ನು ಹೆಚ್ಚಿಸಿರುವ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಹಲವಾರು ವಿಚಾರದಲ್ಲಿ ವೇತನ ಹೆಚ್ಚಾಗಿರಲಿಲ್ಲ. ಎಲ್ಲಾ ಪಕ್ಷದ ಶಾಸಕರ ಅಭಿಪ್ರಾಯ, ದಿನನಿತ್ಯದ ಓಡಾಟ, ಹಣದುಬ್ಬರ ಎಲ್ಲವನ್ನೂ ಪರಿಗಣಿಸಿ ವೇತನವನ್ನು ಹೆಚ್ಚಿಸಲಾಗಿದೆ ಎಂದರು.

    ಮಾರ್ಚ್ 4 ರಂದು ಬಜೆಟ್:
    ಬಜೆಟ್ ಮಾರ್ಚ್ 04 ರಂದು ಮಂಡಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಬೇಲಿಯೇ ಎದ್ದು ಹೊಲಮೇಯ್ದಂತೆ

    ಸುಮಾ ವೀಣಾ

    ಕಾವರೆ ಕಣೆಗೊಂಡರ್ – ಅಭಿನವಪಂಪನೆಂದು ಬಿರುದಾಂಕಿತನಾಗಿರುವ  ನಾಗಚಂದ್ರ ಕವಿಯ ರಾಮಚಂದ್ರ ಚರಿತಪುರಾಣದಲ್ಲಿ ಈ  ಮಾತು ಉಲ್ಲೇಖವಾಗಿದೆ.

    ರಾವಣ  ವಿಧಿಯ ಅಟ್ಟಹಾಸಕ್ಕೆ ಸಿಕ್ಕು ‘ಪದ್ಮಪತ್ರದ ಜಲಬಿಂದುವಿನಂತೆ ಚಲಿತಮಾದುದು ಚಿತ್ತಂ’ ಎಂಬ ನಾಗಚಂದ್ರನ  ಮಾತುಗಳನ್ವಯವೇ ಚಿತ್ತಚಾಂಚಲ್ಯಕ್ಕೊಳಗಾಗಿ  ಸೀತೆಯನ್ನು ಅಪಹರಿಸಿಕೊಂಡು ಹೋಗಿ ಪ್ರಮದ ವನದಲ್ಲಿ ಇರಿಸಿರುತ್ತಾನೆ. ಹೇಗಾದರೂ ಸರಿ  ಆಕೆಯನ್ನು ನಾನು ಕೈವಶಮಾಡಿಕೊಳ್ಳಬೇಕು ಅದಕ್ಕೆ  ನೀನು ಸಹಾಯಮಾಡಬೇಕೆಂದು ತಾನು ಒಲಿಸಿಕೊಂಡಿದ್ದ ಅವಲೋಕಿನಿ ವಿದ್ಯೆಯಲ್ಲಿ  ರಾವಣ ಕೇಳಿಕೊಳ್ಳುತ್ತಾನೆ.

    ಅದಕ್ಕೆ  ಆಕೆ ಉತ್ತರವಾಗಿ  ‘ನಿಷ್ಕಾರಣಮಿವರೊಳ್ ವಿರೋಧಮಂ  ಮಾಡುವುದೇ? ಎನ್ನುತ್ತಾ ರಾಮ ಕಾರಣಪುರುಷ ಆತನ ಹೆಂಡತಿಯನ್ನು ವಿನಾಕಾರಣ  ಅಪಹರಿಸಿ ವಿರೋಧ ಕಟ್ಟಿಕೊಳ್ಳುವುದು ಸರಿಯಲ್ಲ  . ಅಧರ್ಮವನ್ನು ನಿಯಂತ್ರಿಸುವುದು  ರಾಜನ ಕೆಲಸ ಆದರೆ ಅದನ್ನು ಮೀರಿ  ದುರ್ವಿಷಯಕ್ಕೆ ನೀನೇ ಮನಸ್ಸು ಮಾಡುತ್ತಿರುವುದು ಸರಿಯಲ್ಲ.  ನಿನ್ನ ಈ  ಕೆಟ್ಟನಡತೆ ಕಾಯುವ ಕೈಗಳೆ ಕತ್ತಿಹಿಡಿವರೆಂಬ ನಾಣ್ಣುಡಿಗೆ ಸಮ  ಎಂದು ಅವಲೋಕಿನಿ ವಿದ್ಯೆ ಬುದ್ಧಿ ಹೇಳುವ ಪ್ರಯತ್ನವನ್ನು ಮಾಡುತ್ತದೆ. 

    ‘ಕಾವರೆ ಕಣೆಗೊಂಡರ್’ ಎಂಬ ಮಾತು  ಬೇಲಿಯೇ ಎದ್ದು ಹೊಲಮೇಯ್ದಂತೆ,ರಕ್ಷಕರೆ ಭಕ್ಷಕರಾದಂತೆ.  ತಾಯಿಯ ಹಾಲೆ ನಂಜಾದಂತೆ  ಮುಂತಾದ  ನುಡಿಗಳಿಗೆ ಸಮವಾಗಿದೆ.  ಜವಾಬ್ದಾರಿಯಿಲ್ಲದೆ, ತನಗಿರುವ  ಸ್ಥಾನಕ್ಕೆ  ಘನತೆಗೆ ಧಕ್ಕೆ  ತಂದುಕೊಳ್ಳುವ ಕೆಲಸವನ್ನು ಕೆಲವರು ಮಾಡಿಕೊಳ್ಳುತ್ತಾರೆ.  ಅಧಿಕಾರದ ಮದವಾವರಿಸಿರುವವರು, ದುಶ್ಚಟಗಳನ್ನು ಹೊಂದಿರುವವರು ಎಂಥ ನೀಚ ಕೃತ್ಯಕ್ಕೂ ಇಳಿಯಬಲ್ಲರು ಎಂಬುದನ್ನು ಇಲ್ಲಿ  ಅರ್ಥ ಮಾಡಿಕೊಳ್ಳಬಹುದಾಗಿದೆ.  

    ನಾಗಚಂದ್ರ ಕೇವಲ  ಒಂದು ಅಪಸವ್ಯವನ್ನಷ್ಟೇ ಅವಲೋಕಿನಿ ವಿದ್ಯೆಯ ಮೂಲಕ ಹೇಳಿಸಿದ್ದಾನೆ  ಆದರೆ ಇಂಥ ಅನೇಕ  ವೈರುಧ್ಯಗಳು ನಮ್ಮ ನಡುವಿವೆ.  ಇಂದಿನ  ದಿನಮಾನಗಳಲ್ಲಿ  ಕರ್ತವ್ಯ ಮತ್ತು ಜವಾಬ್ದಾರಿಗಳ ಮಹತ್ವವನ್ನು ಯಾರೂ ಅರಿಯುತ್ತಿಲ್ಲ ತಮಗೆ  ಹೇಗೆ ಬೇಕೋ ಹಾಗೆ ಸಾಮಾಜಿಕ, ನೈತಿಕ   ಇತಿಮಿತಿಗಳನ್ನು ಮೀರಿ  ಸ್ವೇಚ್ಛೆಗೆ  ಮನವನ್ನು ಒಪ್ಪಿಸುತ್ತಿದ್ದಾರೆ   ಈ ಕಾರಣದಿಂದಲೇ  ಕೆಲವೊಮ್ಮೆ ಸಾಮಾಜಿಕ ರಕ್ಷಣೆ ಸವಾಲಾಗುತ್ತಿದೆ.  ತನ್ನ ಸ್ಥಾನ,ಕಾರ್ಯ,ಜವಾಬ್ದಾರಿಯನ್ನು  ಅರಿತು  ಸಾಮಾಜಿಕರು ಮುನ್ನಡೆಯಬೇಕಾಗುತ್ತದೆ. 

    ಕಾಯುವವರೆ ಕತ್ತಿ ಹಿಡಿದರು,ಕಾಯುವ ಕೈಗಳೆ  ಕೊಡಲಿ ಕಾವುಗಳಾದವು ಎಂಬ ಮಾತುಗಳು ವಿನಾಶತ್ವವನ್ನು ಎಚ್ಚರಿಸುವ ಮಾತುಗಳು .   ಸಾಮಾಜಿಕ ವ್ಯವಸ್ಥೆಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವವರೆಲ್ಲಾ   ಇದನ್ನು ಅರಿಯಬೇಕಿದೆ…. ಪಾಲಿಸಬೇಕಿದೆ!

    This image has an empty alt attribute; its file name is suma-veena-2-edited.jpg

    ವೃತ್ತಿಯಿಂದ  ಉಪನ್ಯಾಸಕಿ ಪ್ರವೃತ್ತಿಯಿಂದ ಲೇಖಕಿ ಆಗಿರುವ ಸುಮಾವೀಣಾರ ಬರೆಹಗಳು ನಾಡಿನ ಪ್ರಮುಖ ಮುದ್ರಿತ ಮತ್ತು ಅಂತರ್ಜಾಲ  ಪತ್ರಿಕೆಗಳಲ್ಲಿ ಪ್ರಕಟವಾಗಿ  ಜನಮನ್ನಣೆ ಗಳಿಸಿವೆ. ಇವೆ ಸಂಶೋಧನಾತ್ಕ ಬರೆಹಗಳು ಅನನ್ಯವಾಗಿದ್ದು ISBN &ISSN ಸಂಖ್ಯೆಗಳಲ್ಲಿ ಅಚ್ಚಾಗಿವೆ. ಉತ್ತಮ ವಾಗ್ಮಿಯೂ ಆಗಿರುವ  ಇವರ ಸೋದಾಹರಣ ಭಾಷಣಗಳು, ಕತೆಗಳು ಆಕಾಶವಾಣಿಯಲ್ಲಿ ರಾಜ್ಯವ್ಯಾಪಿ ಪ್ರಸಾರ  ಆಗಿವೆ.  ಇವರ ‘ನಲಿವಿನ ನಾಲಗೆ’, ‘ಮನಸ್ಸು ಕನ್ನಡಿ’, ‘ಸೂರ್ಪನಖಿ ಅಲ್ಲ ಚಂದ್ರನಖಿ’, ಲೇಖಮಲ್ಲಿಕಾ ಕೃತಿಗಳು ಬಿಡುಗಡೆಯಾಗಿದ್ದು ಸಾಹಿತ್ಯಾಸಕ್ತರ   ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ.

    error: Content is protected !!