26.7 C
Karnataka
Sunday, April 20, 2025
    Home Blog Page 9

    Art Across Times: ಚಿತ್ರಕಲಾ ಪರಿಷತ್ತಿನ ಹಳೆಯ ವಿದ್ಯಾರ್ಥಿಗಳ ವಿಶಿಷ್ಟ ಕಲಾ ಪ್ರದರ್ಶನ

    ಬಳಕೂರು ವಿ ಎಸ್ ನಾಯಕ

    ಬೆಂಗಳೂರಿನ ಕುಮಾರ ಕೃಪ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ ನ ಕಲಾಗ್ಯಾಲರಿ ಗೆ ಅಡಿ ಇಟ್ಟವರಿಗೆ ಒಂದು ವಿಸ್ಮಯಕಾರಿ ಕಲಾ ತಾಣಕ್ಕೆ ಹೋದಂತ ಅನುಭವ ಆಗಿತ್ತು. ಇಲ್ಲಿ ಪ್ರದರ್ಶನಗೊಂಡ ಕಲಾಕೃತಿಗಳು ಒಂದಕ್ಕಿಂದ ಒಂದು ವಿಭಿನ್ನವಾಗಿದ್ದು ವಿಶೇಷ ವಿನೂತನವಾದ ಅನುಭವ ನೀಡುವಂತಿತ್ತು. ಇದಕ್ಕೆಲ್ಲ ಕಾರಣ ಚಿತ್ರಕಲಾ ಮಹಾವಿದ್ಯಾಲಯದ ಹಳೆ ಕಲಾ ವಿದ್ಯಾರ್ಥಿಗಳ ಸಂಘದವರು ಹಮ್ಮಿಕೊಂಡಿರುವ ಆರ್ಟ್ ಅಕ್ರಾಸ್ ಟೈಮ್ ಎಂಬ ಕಲಾಪ್ರದರ್ಶನ.

    ಚಿತ್ರಕಲಾ ಪರಿಷತ್ತಿನ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಸುಮಾರು 60 ವರ್ಷಗಳ ಸುದೀರ್ಘ ಇತಿಹಾಸವಿರುವ ಈ ಸಂಸ್ಥೆಯಲ್ಲಿ ಬಹಳಷ್ಟುಉನ್ನತ ಕಲಾವಿದರು ರಾಜ್ಯ ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತ್ಯುತ್ತಮ ಕಲಾವಿದರಾಗಿ ಹೊರಹೊಮ್ಮಿದ್ದಾರೆ. ಎಲ್ಲಾ ಹಳೆಯ ಕಲಾ ವಿದ್ಯಾರ್ಥಿಗಳು ಸೇರಿ ತಾವು ರಚಿಸಿರುವ ವಿಭಿನ್ನ ಕಲಾಕೃತಿಗಳ ಸರಣಿಯನ್ನು ಕಲಾಸಕ್ತರ ಮಡಲಿಗೆ ಅರ್ಪಿಸಲು ಹೊರಟಿದ್ದಾರೆ. ಚಿತ್ರಕಲಾ ಪರಿಷತ್ತಿನ ಕಲಾ ಗ್ಯಾಲರಿಯಲ್ಲಿ ವಿಭಿನ್ನ ಕಲಾಕೃತಿಗಳು ವಿಸ್ಮಯಕಾರಿ ನೋಟಕ್ಕೆ ಸಾಕ್ಷಿಯಂತಿದೆ.

    ಕಲಾ ಪ್ರದರ್ಶನದ ವಿಶೇಷತೆ
    ಚಿತ್ರಕಲಾ ಮಹಾವಿದ್ಯಾಲಯದ ಹಳೆವಿದ್ಯಾರ್ಥಿಗಳ ಕಲಾ ಪ್ರದರ್ಶನ ವಿಶೇಷವಾದ ಮೆರಗನ್ನು ನೀಡುವಂತಿದೆ. ರಾಜ್ಯ ದೇಶ ಅಂತರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನದಲ್ಲಿರುವ ಹಲವಾರು ಕಲಾವಿದರು ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುವುದು ವಿಶೇಷ. ಒಂದೇ ಸೂರಿನಡಿ ವಿವಿಧ ಪ್ರಕಾರದ ಕಲಾಕೃತಿಗಳು ವಿಶೇಷ ಹಿನ್ನೆಲೆಯನ್ನು ಹೊಂದಿ ಪ್ರದರ್ಶನ ಮಾಡಿದ್ದಾರೆ.

    ವಿಭಿನ್ನ ಕಲಾಕೃತಿಗಳ ಸರಣಿ

    ಈಗ ಕಲಾಪ್ರದರ್ಶನದಲ್ಲಿ 60ಕ್ಕಿಂತ ಹಳೆಯ ಚಿತ್ರಕಲಾವಿದರು ಅದರಲ್ಲೂ ಚಿತ್ರಕಲೆ ಗ್ರಾಫಿಕ್ ಫೋಟೋಗ್ರಫಿ ಪ್ರತಿಷ್ಠಾಪನಾ ಕಲೆ. ಶಿಲ್ಪಕಲೆ ಎಲ್ಲವೂ ಕೂಡ ಒಂದೇ ಕಡೆಗೆ ಇರುವುದರಿಂದ ಕಲಾಸಕ್ತರಿಗೆ ವಿಭಿನ್ನ ಅನುಭವ ಸಿಗುತ್ತದೆ. ಇಲ್ಲಿ ಓದಿ ಸಾಧನೆಯನ್ನು ಮಾಡಿದ ಹಲವಾರು ಕಲಾವಿದರು ಇಡೀ ಭಾರತದಲ್ಲಿ ಕಾರ್ಯನಿರತ ರಾದ ಎಲ್ಲಾ ಕಲಾವಿದರ ಚಿತ್ರಗಳು ನೋಡಲು ಸಿಗುತ್ತದೆ

    ಉದ್ದೇಶ

    ಇಲ್ಲಿ ಪ್ರದರ್ಶನ ಗೊಳ್ಳುವ ಕಲಾಕೃತಿಗಳು ಕಲಾ ವಿದ್ಯಾರ್ಥಿಗಳಿಗೆ ಕಲಿಕೆ ಮಾಡಲು ಇದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಅನುಕೂಲವಾಗುತ್ತದೆ ಇಂದಿನ ಆಧುನಿಕ ತಂತ್ರಜ್ಞಾನ ಬಗ್ಗೆ ವಿವರಣೆ. ವಿಚಾರವಿನಿಮಯ. ಮತ್ತು ತಾವು ಕಲಿತದ್ದನ್ನು ಬೇರೆಯವರಿಗೆ ಯಾವ ರೀತಿಯಾಗಿ ತಿಳಿಸಿ ಕೊಡಬಹುದು ಎಂಬ ವಿಚಾರವೂ ಕೂಡ ಇಲ್ಲಿ ಕಾರ್ಯಾಗಾರಗಳ ಮೂಲಕ ಎಲ್ಲಾ ಕಲಾವಿದರು ವಿವರಿಸಿ ಹೇಳುತ್ತಾರೆ ಸಾಂಪ್ರದಾಯಿಕ ಚಿತ್ರಕಲೆಯಿಂದ ಹಿಡಿದು ಎಲ್ಲಾ ಪ್ರಕಾರದ ಮಾಧ್ಯಮದ ಚಿತ್ರಕಲೆಯ ಪ್ರದರ್ಶನ ಇದಾಗಿದ್ದು ತಮ್ಮ ಬಿಡುವಿನ ಸಮಯದಲ್ಲಿ ಚಿತ್ರಕಲಾ ಪರಿಷತ್ತಿನ ಆವರಣಕ್ಕೆ ಬಂದು ಕಣ್ಣುತುಂಬಿಕೊಳ್ಳಬಹುದು

    ಚಿತ್ರಕಲಾ ಪ್ರದರ್ಶನ ನಡೆಯುವ ಸ್ಥಳ
    ಕರ್ನಾಟಕ ಚಿತ್ರಕಲಾ ಪರಿಷತ್ತಿನ ಏಳನೇ ಕಲಾಗ್ಯಾಲರಿ
    ಕುಮಾರಕೃಪಾ ರಸ್ತೆ ಬೆಂಗಳೂರು
    ಪ್ರವೇಶ ಉಚಿತ
    ಸಮಯ 11.00 ಗಂಟೆಯಿಂದ ಸಂಜೆ 6ರವರೆಗೆ
    ಈ ಪ್ರದರ್ಶನವು ಅಕ್ಟೋಬರ್ 18 ರವರೆಗೆ ನಡೆಯಲಿದೆ.

    This image has an empty alt attribute; its file name is V-S-NAIK.jpg

    ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಉಪನ್ಯಾಸಕರಾಗಿರುವ ವಿ. ಎಸ್ . ನಾಯಕರ ಪೂರ್ಣ ಹೆಸರು ವೆಂಕಟದಾಸ್ ಎಸ್ . ನಾಯಕ. ನಾಡಿನ ಅನೇಕ ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ. ಅನೇಕ ಸಂಸ್ಥೆಗಳಲ್ಲಿ ಕಾರ್ಯಕ್ರಮ ಸಂಯೋಜಕರಾಗಿಯೂ ಪರಿಚಿತರು. ದೂರದರ್ಶನದಲ್ಲಿ ಗಾಂಧೀ ವಿಚಾರಧಾರೆ ಕುರಿತು ಅನೇಕ ಉಪನ್ಯಾಸಗಳನ್ನು ನೀಡಿದ್ದಾರೆ. ಹಲವಾರು ಸಂಸ್ಥೆಗಳ ಪುರಸ್ಕಾರಕ್ಕೂ ಪಾತ್ರರಾಗಿದ್ದಾರೆ.

    ಬೆಂಗಳೂರಿಗೆ ಬಂದ ವಿಶ್ವದ ಅತಿದೊಡ್ಡ ಏರ್‌ಬಸ್ A380

    BENGALURU OCT 14

    ವಿಶ್ವದ ಅತಿದೊಡ್ಡ ಏರ್‌ಬಸ್ A380 ಡಬಲ್ ಡೆಕ್ಕರ್ ವಿಮಾನ ಇಂದು ಮೊದಲಬಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಸಾಕ್ಷಿಯಾದರು.

    ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಂತರ ಮಾತನಾಡಿದ ಸಚಿವರು, ವಿಶ್ವದ ಅತಿ ದೊಡ್ಡ ನಾಗರಿಕ ವಿಮಾನಯಾನ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಎಮಿರೇಟ್ಸ್ ಏರ್‌ಲೈನ್ಸ್‌ ಗೆ ಅನಂತ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

    A380 ವಿಮಾನವು ಮುಂಬೈ ನಂತರ ಹಾರಾಟ ನಡೆಸುತ್ತಿರುವ ಎರಡನೇ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ಪಾತ್ರವಾಗಿದೆ ಎಂದು ಹೇಳಿದರು.

    ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಭಾರತವು ಸಾಂಸ್ಕೃತಿಕ, ಆರ್ಥಿಕ ಮತ್ತು ಧಾರ್ಮಿಕವಾಗಿ ಸಾಕಷ್ಟು ಸ್ನೇಹಬಾಂದವ್ಯ ಹೊಂದಿದೆ. ಎಮಿರೇಟ್ಸ್‌ ವಿಮಾನ ಹಾರಾಟದಿಂದ ಎರಡು ದೇಶಗಳ ನಡುವಿನ ಬಾಂದವ್ಯ ಮತ್ತಷ್ಟು ಗಟ್ಟಿಯಾಗಲಿದೆ ಎಂದರು.

    ಮಂತ್ರಾಲಯಕ್ಕೆ ಮುಖ್ಯಮಂತ್ರಿಗಳ ಭೇಟಿ

    MANTRALAYAM OCT 10

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಬಿ‌. ಶ್ರೀರಾಮುಲು, ಶಂಕರ ಪಾಟೀಲ ಮುನೇನಕೊಪ್ಪ ಹಾಜರಿದ್ದರು. ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಗಳು ರಾಜ್ಯದಿಂದ ಆಗಮಿಸುವ ಭಕ್ತರಿಗೆ ಅನುಕೂಲತೆಗಳನ್ನು ಕಲ್ಪಿಸುವಂತೆ ಕೋರಿದರು.

    ರಾಯಚೂರಿಗೆ ಏಮ್ಸ್, ಮಂತ್ರಾಲಯ ಸೇತುವೆಗೆ ಮಾಜಿ ಸಿಎಂ ಬಿಎಸ್ ವೈ ಹೆಸರು

    RAICHUR OCT 11

    ಬಹುದಿನಗಳ ಬೇಡಿಕೆಯಾದ ಏಮ್ಸ್ ಸಂಸ್ಥೆಯನ್ನು ರಾಯಚೂರಿಗೆ ತರಲು ಎಲ್ಲಾ ಪ್ರಯತ್ನಗಳು ನಡೆದಿದೆ. ಕೇಂದ್ರ ಆರೋಗ್ಯ ಸಚಿವರ ಬಳಿ ಮಾತನಾಡಿದ್ದೇನೆ. ಮುಂದಿನ ವಾರ ದೆಹಲಿಗೆ ಹೋಗಿ ಮಾತನಾಡಲಿದ್ದೇನೆ. ನರೇಂದ್ರ ಮೋದಿಯವರ ಆಶೀರ್ವಾದದಿಂದ ಏಮ್ಸ್ ರಾಯಚೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. .ಮಂತ್ರಾಲಯದ ಸೇತುವೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನರ ಹೆಸರು ಇಡಲು ಸಧ್ಯದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

    ಅವರು ಇಂದು ರಾಯಚೂರು ತಾಲ್ಲೂಕಿನ ಗಿಲ್ಲೆಸಗೂರು ಗ್ರಾಮದಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ರಾಯಚೂರಿನ ರಾಜಕಾರಣದಲ್ಲಿ ಬಹಳ ದೊಡ್ಡ ಬದಲಾವಣೆ ಆಗಲಿದೆ. ನಾವು ರಾಯಚೂರಿಗೆ ಮಾಡಿರುವ ಕೆಲಸಗಳ ರಿಪೋರ್ಟ್ ಕಾರ್ಡ್ ಇಟ್ಟು, ನಿಮ್ಮ ಬೆಂಬಲವನ್ನು ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂಬ ಸಂಕಲ್ಪವನ್ನು ಮಾಡಿದ್ದೇವೆ ಎಂದು ತಿಳಿಸಿದರು.

    ರಾಯಚೂರಿನ ಗ್ರಾಮೀಣ ಭಾಗದಲ್ಲಿ 23 ಕೆರೆ ತುಂಬಿಸುವ ಯೋಜನೆಯನ್ನು ಖಂಡಿತವಾಗಿಯೂ ಜಾರಿ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ಕಟ್ಟಕಡೆಯಲ್ಲಿರುವವ ಜಮೀನಿಗೂ ನೀರು ತಲುಪಿಸಲಾಗುವುದು. ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ ಭಾಜಪ ಸರ್ಕಾರ ಕಂಕಣಬದ್ಧವಾಗಿದೆ ಎಂದರು.

    ರಾಯಚೂರು ಜಿಲ್ಲೆಗೆ ವಿಶೇಷವಾದ ಕೈಗಾರಿಕಾ ಯೋಜನೆ :

    ರಾಯಚೂರು ಕರ್ನಾಟಕದ ಹೃದಯ ಭಾಗ. ವಿದ್ಯುತ್ ಕೊಡುವ ಮಹತ್ವದ ಕೇಂದ್ರ. ಈ ಭಾಗದಲ್ಲಿ ಔದ್ಯೋಗೀಕರಣವಾಗಬೇಕು, ಯುವಕರಿಗೆ ಉದ್ಯೋಗ ಸಿಗಬೇಕು. ರಾಯಚೂರು ಜಿಲ್ಲೆಗೆ ವಿಶೇಷವಾದ ಕೈಗಾರಿಕಾ ಯೋಜನೆಗಳನ್ನು ಬರುವ ತಿಂಗಳಲ್ಲಿ ಘೋಷಣೆ ಮಾಡಲಾಗುವುದು. ರಾಯಚೂರು ವಿಶ್ವವಿದ್ಯಾಲಯಕ್ಕೆ ಅನುದಾನ, ರಾಯಚೂರು ಜಿಲ್ಲೆಯ ಮಕ್ಕಳ ಪೌಷ್ಟಿಕ ಆಹಾರಕ್ಕೆ ವಿಶೇಷ ಅನುದಾನ ನೀಡಲಾಗುವುದು ಎಂದರು.

    ಕಲ್ಯಾಣ ಕರ್ನಾಟಕ ಅಭಿವೃದ್ದಿ :

    ಕಲ್ಯಾಣ ಕರ್ನಾಟದಲ್ಲಿ 1101 ಶಾಲಾ ಕೊಠಡಿಗಳನ್ನು ಕಟ್ಟಲು ವಿಶೇಷ ಅನುದಾನ, 64 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರಾರಂಭ, ಪ್ರತಿ ಕ್ಷೇತ್ರಕ್ಕೆ, ರಸ್ತೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಬರುವ ದಿನಗಳಲ್ಲಿ ಈ ಭಾಗಕ್ಕೆ 5000 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ನೀಡಲಾಗುವುದು., ಇದನ್ನು ಮಾಡೇ ತೀರುತ್ತೇನೆ ಎಂದರು. ಕಲ್ಯಾಣ ಕರ್ನಾಟಕಕ್ಕೆ, ದೀನದಲಿತರಿಗೆ, ರಾಯಚೂರಿಗೆ ಕೈಕೊಟ್ಟು, ಇಡೀ ಕರ್ನಾಟಕದ ಜನತೆಗೆ ಸುಳ್ಳು ಹೇಳಿದ್ದಾರೆ. ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿದರೆ ಸತ್ಯವಾಗುತ್ತದೆ ಎಂದುಕೊಂಡಿದ್ದಾರೆ. ಜನಮನ್ನಣೆ ಕೊಡುತ್ತಾರೆ ಎಂದು ಕಾಂಗ್ರೆಸ್ ನವರು ತಿಳಿದಿದ್ದಾರೆ ಎಂದರು.

    ದುಡಿಯುವ ವರ್ಗ ಭವಿಷ್ಯ ನಿರ್ಮಾಣ:

    ಸನ್ಮಾನ್ಯ ಯಡಿಯೂರಪ್ಪನವರ ಅವಧಿಯಲ್ಲಿ ರೈತರಿಗೆ 10 ಹೆಚ್ ಪಿ ಉಚಿತ ವಿದ್ಯುತ್, ರೈತ ಸನ್ಮಾನ ಯೋಜನೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ, ರೈತಬಂಧುಗಳ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು 10 ಲಕ್ಷ ರೈತರ ಮಕ್ಕಳಿಗೆ ನೀಡಲಾಗಿದೆ. ರೈತ ಕೂಲಿ ಮಕ್ಕಳಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಡ್ರೈವರ್, ಆಟೋಚಾಲಕರ ಮಕ್ಕಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗಿದೆ. ದುಡಿಯುವ ವರ್ಗ ಭವಿಷ್ಯ ನಿರ್ಮಾಣಕ್ಕೆ ಸಹಾಯ ಮಾಡುತ್ತಿದ್ದೇವೆ. ನಮ್ಮ ಸರ್ಕಾರ 28 ಸಾವಿರ ಕೋಟಿ ರೂ. ಎಸ್‍ಸಿಪಿ, ಟಿಎಸ್‍ಪಿ ಯೋಜನೆಗಳಿಗೆ ನೀಡಲಾಗಿದೆ. ಎಸ್ ಸಿ ಎಸ್ ಟಿ ಬಡ ಜನರಿಗೆ ವಿದ್ಯುತ್ ಉಚಿತ, 2 ಲಕ್ಷ ಮನೆ ನಿರ್ಮಾಣಕ್ಕೆ, 100 ಯುವಕರಿಗೆ ಉದ್ಯೋಗ ಬಾಬು ಜಗಜೀವನರಾಂ ಅವರ ಹೆಸರಿನಲ್ಲಿ ಸ್ವಯಂಉದ್ಯೋಗ ಕೊಡುವ ಯೋಜನೆ , 100 ಅಂಬೇಡ್ಕರ್ ಹಾಸ್ಟೆಲ್ಗಳು, ಕಲ್ಬುರ್ಗಿ ಸೇರಿದಂತೆ 5 ವಿವಿಧ ಶೈಕ್ಷಣಿಕ ಕೇಂದ್ರಗಳಲ್ಲಿ ಮೆಗಾ ಹಾಸ್ಟೆಲ್‍ಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಹಾಗೂ ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡಿ ಉತ್ಪಾದನೆ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯವನ್ನು ನೀಡಲಾಗುತ್ತಿದ್ದು, 5 ಲಕ್ಷ ಮಹಿಳೆಯರಿಗೆ ಹಾಗೂ 5 ಲಕ್ಷ ಯುವಕರಿಗೆ ಉದ್ಯೋಗ ನೀಡಲಾಗುತ್ತಿದೆ ಎಂದರು.

    UVCE ಆಡಳಿತ ಮಂಡಳಿಗೆ ಸದಸ್ಯರ ನೇಮಕ; ಸಡಗೋಪನ್, ಬಿ.ವಿ.ಜಗದೀಶ್ ಗೆ ಸ್ಥಾನ

    BENGALURU OCT 11

    ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯೂನಿವರ್ಸಿಟಿ ಆಫ್ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ (ಯುವಿಸಿಇ)ನ ಪ್ರಥಮ ಆಡಳಿತ ಮಂಡಳಿಗೆ ಸರಕಾರವು ಬೆಂಗಳೂರು ಐಐಐಟಿಯ ಸಂಸ್ಥಾಪಕ ಮತ್ತು ನಿವೃತ್ತ ನಿರ್ದೇಶಕ ಪ್ರೊ.ಎಸ್.ಸಡಗೋಪನ್ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಬಿ.ವಿ.ಜಗದೀಶ್ ಸೇರಿದಂತೆ ಹಲವರನ್ನು ಸದಸ್ಯರನ್ನಾಗಿ ನೇಮಿಸಿದೆ.

    ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಇದಕ್ಕೆ ತಮ್ಮ ಅನುಮೋದನೆ ನೀಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಮಂಗಳವಾರ ತಿಳಿಸಿದ್ದಾರೆ.

    ಉಳಿದಂತೆ ನೆಕ್ಸ್ಟ್ ವೆಲ್ತ್ ಕಂಪನಿಯ ಸಹ ಸಂಸ್ಥಾಪಕಿ ಮತ್ತು ಸಿಇಒ ಮೈಥಿಲಿ ರಮೇಶ್, ಭಾರತೀಯ ವಿಜ್ಞಾನ ಸಂಸ್ಥೆಯ ಮಿದುಳು ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ವೈ. ನರಹರಿ, ಧಾರವಾಡದ ಐಐಟಿ ರಿಜಿಸ್ಟ್ರಾರ್ ಪ್ರೊ ಬಿ. ಬಸವರಾಜಪ್ಪ, ಜೆರೋಡಾ ಕಂಪನಿಯ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಸಂಸ್ಥೆಯ ಹಳೆಯ ವಿದ್ಯಾರ್ಥಿಯೂ ಆಗಿರುವ ಏರ್ ವೈಸ್ ಮಾರ್ಷಲ್ ಬಿ.ನರೇಂದ್ರ ಕುಮಾರ್ ಅವರನ್ನು ಆಡಳಿತ ಮಂಡಳಿಯ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಇವರೆಲ್ಲರ ಅಧಿಕಾರಾವಧಿ ಮೂರು ವರ್ಷಗಳಾಗಿವೆ. ಇವರೆಲ್ಲ ಯುವಿಸಿಇಯನ್ನು ಜಾಗತಿಕ ಮಟ್ಟದ ಸಂಸ್ಥೆಯನ್ನಾಗಿ ಬೆಳೆಸಲು ಸೂಕ್ತ ಯೋಜನೆಗಳನ್ನು ರೂಪಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.

    ಎಂಜಿನಿಯರಿಂಗ್ ಶಿಕ್ಷಣದಲ್ಲಿ ಡಿಸೆಂಬರ್ ವೇಳೆಗೆ ಭಾರೀ ಸುಧಾರಣೆ: ಅಶ್ವತ್ಥನಾರಾಯಣ

    BENGALURU OCT 10

    ಡಿಸೆಂಬರ್ ವೇಳೆಗೆ ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸಮಗ್ರ ಸುಧಾರಣೆ ತರಲಾಗುವುದು. ಈ ಪ್ರಕ್ರಿಯೆ ಈಗ ಅಂತಿಮ ರೂಪದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

    ಮಾಗಡಿ ರಸ್ತೆಯ ಈಸ್ಟ್ ವೆಸ್ಟ್ ಎಂಜಿನಿಯರಿಂಗ್ ಕಾಲೇಜು ಸೋಮವಾರ ಎಥ್ನೋಟೆಕ್ ಅಕಾಡೆಮಿಯ ಜತೆಗೂಡಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ‘ರವಿಶಂಕರ್ ಉತ್ಕೃಷ್ಟತಾ ಕೇಂದ್ರ’ವನ್ನು ಉದ್ಘಾಟಿಸಿ ಮಾತನಾಡಿದರು.

    ಸದ್ಯಕ್ಕೆ ರಾಜ್ಯದಲ್ಲಿ ಸರಕಾರಿ ಕಾಲೇಜುಗಳಲ್ಲಿ ಕಲಿಕೆ ಮತ್ತು ಬೋಧನೆಯ ಡಿಜಿಟಲೀಕರಣ ನಡೆಯುತ್ತಿದೆ. ಇದನ್ನು ಸದ್ಯದಲ್ಲೇ ಖಾಸಗಿ ಕಾಲೇಜುಗಳಿಗೂ ವಿಸ್ತರಿಸಲಾಗುವುದು ಎಂದು ಅವರು ನುಡಿದರು.

    ರಾಜ್ಯದಲ್ಲಿ ಉನ್ನತ ಶಿಕ್ಷಣ ವಲಯದಲ್ಲಿ ಅಭೂತಪೂರ್ವ ಸುಧಾರಣೆಗಳನ್ನು ತರಲಾಗುತ್ತಿದೆ. ಈಗ ನಮ್ಮ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಉದ್ಯಮಗಳ ಜತೆ ಬೆಸೆಯಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆಯನ್ನು ಬೆಳೆಸಲಾಗುತ್ತಿದೆ ಎಂದು ಅವರು ವಿವರಿಸಿದರು.

    ಎಂಜಿನಿಯರಿಂಗ್ ಶಿಕ್ಷಣದ ಆಡಳಿತ, ಪಠ್ಯಕ್ರಮ, ಇಂಟರ್ನ್ಶಿಪ್ ಇತ್ಯಾದಿಗಳನ್ನು ಆಮೂಲಾಗ್ರವಾಗಿ ಸುಧಾರಿಸಲಾಗುವುದು. ಇಂಟರ್ನ್ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವೇತನ ಕೊಡುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಅವರು ಹೇಳಿದರು.

    ಗುಣಮಟ್ಟದ ಶಿಕ್ಷಣ ಮಾತ್ರವೇ ಸಮಾಜದ ಸಬಲೀಕರಣ ಸಾಧ್ಯ. ನಾವು ಸೀಮಿತವಾಗಿ ಯೋಚಿಸದೆ ಜಾಗತಿಕ ಸ್ತರದಲ್ಲಿ ಸ್ಪರ್ಧೆಯನ್ನು ಎದುರಿಸುವಂತಹ ಗುರಿಯನ್ನು ಹೊಂದುವುದು ಅತ್ಯಗತ್ಯವಾಗಿದೆ. ಇಲ್ಲದೆ ಹೋದರೆ ಅವಕಾಶಗಳು ಕೈತಪ್ಪಿ ಹೋಗುತ್ತವೆ ಎಂದು ಸಚಿವರು ಪ್ರತಿಪಾದಿಸಿದರು.

    ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಬಿಜಿಎಸ್ ಮತ್ತು ಎಸ್ ಜೆ ಬಿ ಸಮೂಹ ಸಂಸ್ಥೆಗಳು ಮತ್ತು ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶನಾಥ ಸ್ವಾಮೀಜಿ,
    ಈಸ್ಟ್ ವೆಸ್ಟ್ ಶಿಕ್ಷಣ ಸಮೂಹದ ಅಧ್ಯಕ್ಷೆ ರಶ್ಮಿ ರವಿಶಂಕರ್, ನ್ಯಾಕ್ ನಿರ್ದೇಶಕ ಡಾ.ಶಾಮಸುಂದರ್, ಎಥ್ನೋಟೆಕ್ ಅಕಾಡೆಮಿಯ ಮುಖ್ಯಸ್ಥ ಕಿರಣ್ ರಾಜಣ್ಣ, ಈಸ್ಟ್ ವೆಸ್ಟ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ತೇಜಸ್ ಕಿರಣ ಮುಂತಾದವರು ಉಪಸ್ಥಿತರಿದ್ದರು.

    ಉ.ಪ್ರ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

    LUCKNOW OCT 10

    ಹಿರಿಯ ರಾಜಕಾರಣಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ -Mulayam Singh Yadav- ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಅವರಿಗೆ 82 ವರ್ಷ ವಯಸ್ಸಾಗಿತ್ತು.

    ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವರು ಕೇಂದ್ರ ರಕ್ಷಣಾ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮುಲಾಯಂ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ

    ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ನಿಧನಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ರಾಮ್ ಮನೋಹರ್ ಲೋಹಿಯಾ, ರಾಜ್ ನಾರಾಯಣ್ ಅವರಂಥ ನಾಯಕರ ಮಾರ್ಗದರ್ಶನದಲ್ಲಿ ಮುನ್ನೆಲೆಗೆ ಬಂದ ಮುಲಾಯಂ ಸಿಂಗ್ ಅವರು ತುರ್ತು ಪರಿಸ್ಥಿತಿ ವಿರೋಧಿಸಿ ಸೆರೆವಾಸ ಅನುಭವಿಸಿದ್ದರು. ಸಮಾಜವಾದಿ ಪಕ್ಷವನ್ನು ಸ್ಥಾಪಿಸಿ, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಮುಲಾಯಂ ಸಿಂಗ್ ಅವರು ಕೇಂದ್ರ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದ ರಾಷ್ಟ್ರವು ಮುತ್ಸದ್ದಿ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ.

    ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    Dasara Doll Festival: ಪದ್ಮಶ್ರೀ ಅರವಿಂದ ಅವರ ಮನೆಯ ದಸರಾ ಗೊಂಬೆ ನೋಟ

    ಕನ್ನಡಪ್ರೆಸ್ .ಕಾಮ್ ನ ದಸರಾ ಗೊಂಬೆ ಹಬ್ಬಕ್ಕೆ ಅತ್ಯತ್ತುಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ವಿಜಯದಶಮಿ. ಗೊಂಬೆ ಹಬ್ಬ ಇಂದು ಮಕ್ತಾಯವಾಗುತ್ತಿದೆ. ಭಾಗವಹಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದ . ಇಂದಿನ ಕೊನೆಯ ಕಂತಿನಲ್ಲಿ ಬೆಂಗಳೂರು ವಿದ್ಯಾರಣ್ಯಪುರದ ಪದ್ಮಶ್ರೀ ಅರವಿಂದ ಅವರ ಮನೆಯ ಗೊಂಬೆ ಲೋಕವನ್ನು ಪ್ರಸ್ತುತ ಪಡಿಸುತ್ತಿದ್ದೇವೆ.

    Dasara Doll Festival:ಎಂಥ ಅಂದ ಎಂಥ ಚಂದ ದಸರಾ ಗೊಂಬೆ ನೋಟ

    ದಸರಾ ಗೊಂಬೆ ಹಬ್ಬಕ್ಕೆ ಫೋಟೋಗಳು ಹರಿದು ಬರುತ್ತಲೆ ಇವೆ. ಇಂದು ಕೆಲವು ಆಕರ್ಷಕ ಗೊಂಬೆ ಮನೆಗಳ ಫೋಟೋಗಳನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ.

    MYSURU DASARA: ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದ ಮುಖ್ಯಮಂತ್ರಿ

    MYSURU OCT 4

    ಕನ್ನಡ ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಸಕಲ ಮಂಗಳವನ್ನುಂಟು ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

    ಇಂದು ಬಸವರಾಜ ಬೊಮ್ಮಾಯಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

    ಮೈಸೂರು ದಸರಾ ಈ ಬಾರಿ ಅದ್ದೂರಿ, ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ಜನರು ಸೇರಿ ದಸರಾ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸತ್ ಸದಸ್ಯರು ಯೋಜನಾಬದ್ಧವಾಗಿ ಹಬ್ಬವನ್ನು ಅತ್ಯಂತ ಯಶಸ್ವಿಯಾಗಿ ಆಚರಣೆ ಮಾಡಿದ್ದಾರೆ. ಅವರಿಗೆ ಮತ್ತು ನಾಡಿನ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

    ನಾಳೆ ಆಯುಧ ಪೂಜೆ, ಜಂಬೂ ಸವಾರಿ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ನಮ್ಮ ಗೌರವಾನ್ವಿತ ರಾಜ್ಯಪಾಲರು ಭಾಗವಹಿಸುತ್ತಿಲ್ಲ ಎಂದು ತಿಳಿಸಿದರು.

    ಸರ್ಕಾರಿ ನೌಕರರಿಗೆ ಏಳನೇ ಆಯೋಗದ ವೇತನ ಸೇರಿದಂತೆ ಯಾವುದೇ ವಿಚಾರಗಳ ಬಗ್ಗೆ ಇವತ್ತು ಮಾತನಾಡುವುದಿಲ್ಲ. ಇವತ್ತು ಹಬ್ಬದ ವಾತಾವರಣವಿದೆ. ನಾಡಿನ ಜನರು ಆನಂದದಿಂದ ದಸರಾ ಹಬ್ಬವನ್ನು ಆಚರಣೆ ಮಾಡಲಿ ಎಂದು ಸಿಎಂ ಬೊಮ್ಮಾಯಿ‌ ಕೋರಿದರು.

    error: Content is protected !!